Webdunia - Bharat's app for daily news and videos

Install App

ಶಿವರಾಜ್ ಕುಮಾರ್, ಉಪೇಂದ್ರ ಸೇರಿದಂತೆ ಒಟ್ಟಿಗೇ ಪ್ರಯಾಣಿಸಿದ ಸ್ಯಾಂಡಲ್ ವುಡ್ ತಾರೆಯರು

Krishnaveni K
ಸೋಮವಾರ, 2 ಸೆಪ್ಟಂಬರ್ 2024 (15:52 IST)
Photo Credit: Instagram
ಬೆಂಗಳೂರು: ಕನ್ನಡ ಚಿತ್ರರಂಗದ ಸ್ಟಾರ್ ನಟರಾದ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ದುನಿಯಾ ವಿಜಯ್, ಮಾಲಾಶ್ರೀ ಸೇರಿದಂತೆ ಘಟಾನುಘಟಿ ತಾರೆಯರು ಒಟ್ಟಿಗೇ ವಿಮಾನ ಪ್ರಯಾಣ ಮಾಡಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕನ್ನಡ ಚಿತ್ರರಂಗದ ಪ್ರಮುಖ ತಾರೆಯರೆಲ್ಲಾ ಒಟ್ಟಿಗೇ ಹೈದರಾಬಾದ್ ಕಡೆಗೆ ವಿಮಾನಯಾನ ನಡೆಸಿದ್ದಾರೆ. ಈ ಫೋಟೋಗಳನ್ನು ನೋಡಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಇವರೆಲ್ಲಾ ಒಟ್ಟಿಗೇ ಎಲ್ಲಿಗೆ ಹೋಗಿದ್ದಾರೆ ಎಂಬುದು ಈಗ ಬಯಲಾಗಿದೆ.

ತೆಲುಗು ನಟ ಬಾಲಯ್ಯ ಚಿತ್ರರಂಗಕ್ಕೆ ಪ್ರವೇಶ ಮಾಡಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ತೆಲುಗು ಚಿತ್ರರಂಗ ವಿಶೇಷ ಕಾರ್ಯಕ್ರಮ ಏರ್ಪಡಿಸಿತ್ತು. ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಬಾಲಯ್ಯ ಆಪ್ತರನ್ನೂ ಆಹ್ವಾನಿಸಲಾಗಿದೆ. ಹೀಗಾಗಿ ಎಲ್ಲಾ ತಾರೆಯರು ಒಟ್ಟಾಗಿ ಪ್ರಯಾಣ ಮಾಡಿದ್ದಾರೆ.

ದುನಿಯಾ ವಿಜಯ್ ಇತ್ತೀಚೆಗಷ್ಟೇ ಬಾಲಯ್ಯ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದರು. ಮಾಲಾಶ್ರೀ, ಉಪೇಂದ್ರ, ಶಿವಣ್ಣ ಮೊದಲಾದವರಿಗೆ ತೆಲುಗು ಚಿತ್ರರಂಗದೊಂದಿಗೆ ಮೊದಲೇ ವಿಶೇಷ ನಂಟಿದೆ. ಹೀಗಾಗಿ ಎಲ್ಲರೂ ಒಟ್ಟಾಗಿ ತೆರಳಿ ಬಾಲಯ್ಯಗೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments