Webdunia - Bharat's app for daily news and videos

Install App

ಕ್ಯಾನ್ಸರ್‌ ಗೆದ್ದು ಬೆಂಗಳೂರಿಗೆ ಬರುತ್ತಿದ್ದಂತೆ ಶೂಟಿಂಗ್‌ ಬಗ್ಗೆ ಅ‍ಪ್‌ಡೇಟ್‌ ನೀಡಿದ ಶಿವಣ್ಣ

Sampriya
ಭಾನುವಾರ, 26 ಜನವರಿ 2025 (13:51 IST)
Photo Courtesy X
ಬೆಂಗಳೂರು: ಕ್ಯಾನ್ಸರ್‌ಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡ ನಂತರ ಬೆಂಗಳೂರಿಗೆ ಬಂದಿರುವ ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌ ಅವರು ಶೂಟಿಂಗ್‌ ಕುರಿತು ಅಪ್‌ಡೇಟ್‌ ನೀಡಿದ್ದಾರೆ.

ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದು ತಿಂಗಳ ರೆಸ್ಟ್ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.

ಅಮೆರಿಕಕ್ಕೆ ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು, ಹೋಗಿ ಬಂದೆ. ಹೋಗಬೇಕಿದ್ದರೆ ಸ್ವಲ್ಪ ಭಯ ಇತ್ತು. ಅಭಿಮಾನಿಗಳ ಆಶೀರ್ವಾದದಿಂದ ಹೋಗಿಬಂದೆ ಎಂದರು.  

ಫ್ಲೈಟ್‌ನಲ್ಲಿ 20 ಗಂಟೆಯಾಯಿತು. ಆರು ಗಂಟೆ ಕಾಲ ಸರ್ಜರಿ ನಡೆಯಿತು. ಎರಡನೇ ದಿನದಿಂದಲೇ ವಾಕ್ ಶುರು ಮಾಡಿದೆ. ಆ ಎನರ್ಜಿ ಎಲ್ಲಿಂದ ಬಂತೋ ಗೊತ್ತಿಲ್ಲ. ಅಭಿಮಾನಿಗಳಷ್ಟೇ ಅಲ್ಲ, ಇಂಡಸ್ಟ್ರಿಯವರು ಧೈರ್ಯ ತುಂಬಿದರು. ಗೀತನ ಬಗ್ಗೆ ಮಾತಾಡಲ್ಲ. ಗೀತಾ ಹೆಂಡತಿನೂ ಹೌದು, ತಾಯಿನೂ ಹೌದು. ಈ ಬಾರಿ ಮಗಳು ನಿವೇದಿತಾ ತಾಯಿಗಿಂತ ಹೆಚ್ಚು ನೋಡಿಕೊಂಡಿದ್ದಾಳೆ. ನಿವೇದಿತಾ ಗೆಳತಿ ಅನು ಕೂಡಾ ಒಂದು ತಿಂಗಳು ನಮ್ಮ ಜೊತೆ ಇದ್ದರು ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments