Webdunia - Bharat's app for daily news and videos

Install App

ಕ್ಯಾನ್ಸರ್‌ ಗೆದ್ದು ಬೆಂಗಳೂರಿಗೆ ಬರುತ್ತಿದ್ದಂತೆ ಶೂಟಿಂಗ್‌ ಬಗ್ಗೆ ಅ‍ಪ್‌ಡೇಟ್‌ ನೀಡಿದ ಶಿವಣ್ಣ

Sampriya
ಭಾನುವಾರ, 26 ಜನವರಿ 2025 (13:51 IST)
Photo Courtesy X
ಬೆಂಗಳೂರು: ಕ್ಯಾನ್ಸರ್‌ಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡ ನಂತರ ಬೆಂಗಳೂರಿಗೆ ಬಂದಿರುವ ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌ ಅವರು ಶೂಟಿಂಗ್‌ ಕುರಿತು ಅಪ್‌ಡೇಟ್‌ ನೀಡಿದ್ದಾರೆ.

ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದು ತಿಂಗಳ ರೆಸ್ಟ್ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.

ಅಮೆರಿಕಕ್ಕೆ ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು, ಹೋಗಿ ಬಂದೆ. ಹೋಗಬೇಕಿದ್ದರೆ ಸ್ವಲ್ಪ ಭಯ ಇತ್ತು. ಅಭಿಮಾನಿಗಳ ಆಶೀರ್ವಾದದಿಂದ ಹೋಗಿಬಂದೆ ಎಂದರು.  

ಫ್ಲೈಟ್‌ನಲ್ಲಿ 20 ಗಂಟೆಯಾಯಿತು. ಆರು ಗಂಟೆ ಕಾಲ ಸರ್ಜರಿ ನಡೆಯಿತು. ಎರಡನೇ ದಿನದಿಂದಲೇ ವಾಕ್ ಶುರು ಮಾಡಿದೆ. ಆ ಎನರ್ಜಿ ಎಲ್ಲಿಂದ ಬಂತೋ ಗೊತ್ತಿಲ್ಲ. ಅಭಿಮಾನಿಗಳಷ್ಟೇ ಅಲ್ಲ, ಇಂಡಸ್ಟ್ರಿಯವರು ಧೈರ್ಯ ತುಂಬಿದರು. ಗೀತನ ಬಗ್ಗೆ ಮಾತಾಡಲ್ಲ. ಗೀತಾ ಹೆಂಡತಿನೂ ಹೌದು, ತಾಯಿನೂ ಹೌದು. ಈ ಬಾರಿ ಮಗಳು ನಿವೇದಿತಾ ತಾಯಿಗಿಂತ ಹೆಚ್ಚು ನೋಡಿಕೊಂಡಿದ್ದಾಳೆ. ನಿವೇದಿತಾ ಗೆಳತಿ ಅನು ಕೂಡಾ ಒಂದು ತಿಂಗಳು ನಮ್ಮ ಜೊತೆ ಇದ್ದರು ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments