Select Your Language

Notifications

webdunia
webdunia
webdunia
webdunia

ಅಪ್ಪು ನೆನೆದು ಕಣ್ಣೀರು ಹಾಕಿದ ಶಿವಣ್ಣ

ಅಪ್ಪು ನೆನೆದು ಕಣ್ಣೀರು ಹಾಕಿದ ಶಿವಣ್ಣ
ಹೈದರಾಬಾದ್​ , ಗುರುವಾರ, 9 ಫೆಬ್ರವರಿ 2023 (13:42 IST)
ಶಿವರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ನಡುವೆ ಎಷ್ಟು ಆಪ್ತತೆ ಇತ್ತು ಅನ್ನೋದನ್ನು ಮತ್ತೆ ವಿವರಿಸಿ ಹೇಳಬೇಕಿಲ್ಲ. ಅಪ್ಪುನ ಕಳೆದುಕೊಂಡ ನಂತರದಲ್ಲಿ ಶಿವರಾಜ್​ಕುಮಾರ್ ತುಂಬಾನೇ ದುಃಖಿತರಾಗಿದ್ದಾರೆ. ಪ್ರತಿ ವೇದಿಕೆ ಮೇಲೆ ಅಪ್ಪುನ ನೆನಪಿಸಿಕೊಂಡು ಶಿವಣ್ಣ ಭಾವುಕರಾಗುತ್ತಾರೆ. ಈಗ ಹಾಗೆಯೇ ಆಗಿದೆ. ಹೈದರಾಬಾದ್​ನಲ್ಲಿ ನಡೆದ ‘ವೇದ’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಶಿವಣ್ಣ ಅವರು ಪುನೀತ್ ನೆನೆದು ಭಾವುಕರಾದರು. ಪಕ್ಕದಲ್ಲಿದ್ದ ನಂದಮೂರಿ ಬಾಲಕೃಷ್ಣ ಅವರು ಶಿವರಾಜ್​ಕುಮಾರ್ ಅವರನ್ನು ಸಮಾಧಾನ ಮಾಡಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ‘ವೇದ’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದು ಮೆಚ್ಚುಗೆ ಪಡೆಯಿತು. ವಿಶೇಷ ಎಂದರೆ ಈ ಚಿತ್ರ ತೆಲುಗಿನಲ್ಲೂ ತೆರೆಗೆ ಬರುತ್ತಿದೆ. ಫೆಬ್ರವರಿ 9ಕ್ಕೆ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ತೆಲುಗಿನಲ್ಲಿ ಅಬ್ಬರದ ಪ್ರಚಾರ ನೀಡಲಾಗುತ್ತಿದೆ. ‘ವೆದ’ ತೆಲುಗು ವರ್ಷನ್​ನ ಪ್ರೀ ರಿಲೀಸ್ ಇವೆಂಟ್ ಫೆಬ್ರವರಿ 7ರಂದು ಹೈದರಾಬಾದ್​ನಲ್ಲಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಬಾಲಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಪುನೀತ್ ಅವರ ವಿಡಿಯೋ ಪ್ರಸಾರ ಮಾಡಲಾಯಿತು. ಇದನ್ನು ನೋಡುತ್ತಿದ್ದಂತೆ ಶಿವಣ್ಣ ಅವರಿಗೆ ದುಃಖ ತಡೆಯಲು ಆಗಲೇ ಇಲ್ಲ. ಒಂದೇ ಸಮನೆ ಕಣ್ಣೀರು ಹಾಕಿದರು. ಬಾಲಯ್ಯ ಅವರು ಸಮಾಧಾನ ಮಾಡಲು ಪ್ರಯತ್ನಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್