Webdunia - Bharat's app for daily news and videos

Install App

ಅಪ್ಪು ನೆನೆದು ಕಣ್ಣೀರು ಹಾಕಿದ ಶಿವಣ್ಣ

Webdunia
ಗುರುವಾರ, 9 ಫೆಬ್ರವರಿ 2023 (13:42 IST)
ಶಿವರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ನಡುವೆ ಎಷ್ಟು ಆಪ್ತತೆ ಇತ್ತು ಅನ್ನೋದನ್ನು ಮತ್ತೆ ವಿವರಿಸಿ ಹೇಳಬೇಕಿಲ್ಲ. ಅಪ್ಪುನ ಕಳೆದುಕೊಂಡ ನಂತರದಲ್ಲಿ ಶಿವರಾಜ್​ಕುಮಾರ್ ತುಂಬಾನೇ ದುಃಖಿತರಾಗಿದ್ದಾರೆ. ಪ್ರತಿ ವೇದಿಕೆ ಮೇಲೆ ಅಪ್ಪುನ ನೆನಪಿಸಿಕೊಂಡು ಶಿವಣ್ಣ ಭಾವುಕರಾಗುತ್ತಾರೆ. ಈಗ ಹಾಗೆಯೇ ಆಗಿದೆ. ಹೈದರಾಬಾದ್​ನಲ್ಲಿ ನಡೆದ ‘ವೇದ’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಶಿವಣ್ಣ ಅವರು ಪುನೀತ್ ನೆನೆದು ಭಾವುಕರಾದರು. ಪಕ್ಕದಲ್ಲಿದ್ದ ನಂದಮೂರಿ ಬಾಲಕೃಷ್ಣ ಅವರು ಶಿವರಾಜ್​ಕುಮಾರ್ ಅವರನ್ನು ಸಮಾಧಾನ ಮಾಡಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ‘ವೇದ’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದು ಮೆಚ್ಚುಗೆ ಪಡೆಯಿತು. ವಿಶೇಷ ಎಂದರೆ ಈ ಚಿತ್ರ ತೆಲುಗಿನಲ್ಲೂ ತೆರೆಗೆ ಬರುತ್ತಿದೆ. ಫೆಬ್ರವರಿ 9ಕ್ಕೆ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ತೆಲುಗಿನಲ್ಲಿ ಅಬ್ಬರದ ಪ್ರಚಾರ ನೀಡಲಾಗುತ್ತಿದೆ. ‘ವೆದ’ ತೆಲುಗು ವರ್ಷನ್​ನ ಪ್ರೀ ರಿಲೀಸ್ ಇವೆಂಟ್ ಫೆಬ್ರವರಿ 7ರಂದು ಹೈದರಾಬಾದ್​ನಲ್ಲಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಬಾಲಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಪುನೀತ್ ಅವರ ವಿಡಿಯೋ ಪ್ರಸಾರ ಮಾಡಲಾಯಿತು. ಇದನ್ನು ನೋಡುತ್ತಿದ್ದಂತೆ ಶಿವಣ್ಣ ಅವರಿಗೆ ದುಃಖ ತಡೆಯಲು ಆಗಲೇ ಇಲ್ಲ. ಒಂದೇ ಸಮನೆ ಕಣ್ಣೀರು ಹಾಕಿದರು. ಬಾಲಯ್ಯ ಅವರು ಸಮಾಧಾನ ಮಾಡಲು ಪ್ರಯತ್ನಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments