Select Your Language

Notifications

webdunia
webdunia
webdunia
webdunia

ಕೊನೆಗೂ ಸಿಎಂ ಯಡಿಯೂರಪ್ಪ ಭೇಟಿಗೆ ಸಿದ್ಧರಾದ ಶಿವರಾಜ್ ಕುಮಾರ್ ಬಳಗ

ಕೊನೆಗೂ ಸಿಎಂ ಯಡಿಯೂರಪ್ಪ ಭೇಟಿಗೆ ಸಿದ್ಧರಾದ ಶಿವರಾಜ್ ಕುಮಾರ್ ಬಳಗ
ಬೆಂಗಳೂರು , ಭಾನುವಾರ, 2 ಆಗಸ್ಟ್ 2020 (12:39 IST)
ಬೆಂಗಳೂರು: ಕೊರೋನಾದಿಂದಾಗಿ ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದ್ದು, ಈ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಲು ನಿರ್ಧಾರ ಮಾಡಲಾಗಿದೆ.


ಸ್ಯಾಂಡಲ್ ವುಡ್ ನ ನಾಯಕತ್ವ ವಹಿಸಿರುವ ಶಿವರಾಜ್ ಕುಮಾರ್, ಚಿತ್ರರಂಗದಲ್ಲಿ ಸದ್ಯಕ್ಕೆ ಎದುರಿಸುತ್ತಿರುವ ಸಮಸ್ಯೆಗಳು, ಫಿಲಂ ಸಿಟಿ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಮಂಗಳವಾರ ಈ ಕಾರ್ಯಕ್ರಮ ನಡೆಯುವ ಸಾಧ‍್ಯತೆಯಿದೆ. ಶಿವರಾಜ್ ಕುಮಾರ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮೊನ್ನೆಯಷ್ಟೇ ಚಿತ್ರರಂಗದ ಪ್ರಮುಖ ಸ್ಟಾರ್ ನಟರನ್ನು ಕರೆಸಿಕೊಂಡು, ಸಚಿವ ಸಿಟಿ ರವಿ ಮುಂದೆ ಶಿವಣ್ಣ ಸಮಸ್ಯೆಗಳನ್ನು ತೆರೆದಿಟ್ಟಿದ್ದರು. ಇದೀಗ ಖುದ್ದಾಗಿ ಮುಖ್ಯಮಂತ್ರಿಗಳನ್ನೇ ಭೇಟಿಯಾಗಲು ನಿರ್ಧರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಂದೆಂದಿಗೂ ನಿಮ್ಮ ಕಿಚ್ಚನಾಗಿಯೇ ಇರುವೆ: ಸುದೀಪ್