Webdunia - Bharat's app for daily news and videos

Install App

ನಟ ಸಿದ್ಧಾರ್ಥ್ ಗೆ ಕ್ಷಮೆ ಯಾಚಿಸಿದ ಶಿವರಾಜ್ ಕುಮಾರ್

Webdunia
ಶುಕ್ರವಾರ, 29 ಸೆಪ್ಟಂಬರ್ 2023 (17:15 IST)
Photo Courtesy: Twitter
ಬೆಂಗಳೂರು: ಕಾವೇರಿ ವಿವಾದದ ನಡುವೆ ಬೆಂಗಳೂರಿನಲ್ಲಿ ತಮ್ಮ ತಮಿಳು ಸಿನಿಮಾ ಚಿಕ್ಕು ಪ್ರಚಾರಕ್ಕೆ ಬಂದಿದ್ದ ನಟ ಸಿದ್ಧಾರ್ಥ್ ರನ್ನು ನಿನ್ನೆ ಕನ್ನಡ ಪರ ಸಂಘಟನೆಗಳು ತಡೆದು ಕಾರ್ಯಕ್ರಮ ಸ್ಥಗಿತಗೊಳಿಸಿದ್ದರು.

ಈ ಘಟನೆ ಬಗ್ಗೆ ಇಂದು ಕಾವೇರಿಗಾಗಿ ನಡೆದ ಪ್ರತಿಭಟನಾ ಸಭೆಯಲ್ಲಿ ನಟ ಶಿವರಾಜ್ ಕುಮಾರ್ ಖಂಡಿಸಿದ್ದಾರೆ. ಜೊತೆಗೆ ಕನ್ನಡ ಚಿತ್ರರಂಗದ ಪರವಾಗಿ ಸಿದ್ಧಾರ್ಥ್ ಗೆ ಕ್ಷಮೆ ಕೋರಿದ್ದಾರೆ.

‘ಪರಭಾಷೆಯ ಹೀರೋನ ಪತ್ರಿಕಾಗೋಷ್ಠಿ ನಿಲ್ಲಿಸಲಾಯಿತು. ಅದು ತಪ್ಪಲ್ವ? ಸುಮ್ಮನೆ ಕೂತು ಹೋರಾಟ ಮಾಡಿದ್ರೆ ಪರಿಹಾರ ಸಿಗಲ್ಲ. ಸರ್ಕಾರಗಳು ಕುಂತು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು. ಅದು ಬಿಟ್ಟು ಪರಿಸ್ಥಿತಿ ನೋಡಿ ಲಾಭ ಪಡೆಯಬಾರದು. ಇದು ಹೋರಾಟಕ್ಕೆ ಮರ್ಯಾದೆ ಅಲ್ಲ. ಬೇರೆಯವರಿಗೆ ನೋವು ಕೊಡುವ ಕೆಲಸ ಮಾಡಬಾರದು. ಸಿದ್ಧಾರ್ಥ್ ಸುದ್ದಿಗೋಷ್ಠಿಗೆ ಅಡ್ಡಿಪಡಿಸಿದ್ದು ಸರಿಯಲ್ಲ. ನಮ್ಮ ಇಂಡಸ್ಟ್ರಿ ಪರವಾಗಿ ನಾನು ಕ್ಷಮೆ ಕೇಳುತ್ತೇನೆ. ಇನ್ನು ಈ ರೀತಿ ಆಗಲ್ಲ ಎಂದು ಭರವಸೆ ಕೊಡುತ್ತೇನೆ’ ಎಂದು ಶಿವಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಮುಂದಿನ ಸುದ್ದಿ
Show comments