Select Your Language

Notifications

webdunia
webdunia
webdunia
webdunia

ಶಕ್ತಿಧಾಮದ ಮಕ್ಕಳೊಂದಿಗೆ ಗಾಂಧಿ ಜಯಂತಿ ಆಚರಿಸಿದ ಶಿವಣ್ಣ

ಶಕ್ತಿಧಾಮದ ಮಕ್ಕಳೊಂದಿಗೆ ಗಾಂಧಿ ಜಯಂತಿ ಆಚರಿಸಿದ ಶಿವಣ್ಣ
ಮೈಸೂರು , ಸೋಮವಾರ, 2 ಅಕ್ಟೋಬರ್ 2023 (16:53 IST)
Photo Courtesy: Instagram
ಮೈಸೂರು: ಇಂದು ರಾಷ್ಟ್ರಪಿತ ಮಹಾತ್ಮಾಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಜನ್ಮ ಜಯಂತಿಯನ್ನು ಎಲ್ಲೆಡೆ ಆಚರಿಸಲಾಯಿತು.

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಮೈಸೂರಿನ ಶಕ್ತಿಧಾಮದ ಮಕ್ಕಳೊಂದಿಗೆ ಆಚರಿಸಿಕೊಂಡಿದ್ದಾರೆ.

ದೊಡ್ಮನೆ ಕುಟುಂಬ ನಡೆಸಿಕೊಂಡು ಬರುತ್ತಿರುವ ಶಕ್ತಿಧಾಮದಲ್ಲಿ ಶಿವಣ್ಣ ಇಂದು ಮಕ್ಕಳೊಂದಿಗೆ ಕಾಲ ಕಳೆದಿದ್ದಾರೆ. ಮಕ್ಕಳು ಗಾಂಧೀಜಿ, ಶಾಸ್ತ್ರೀಜಿ ಚಿಂತನೆಗಳನ್ನು ಅಳವಡಿಸಿಕೊಳ್ಳಲಿ ಎಂದು ಅವರು ಆಶಿಸಿದ್ದಾರೆ.

ನಿನ್ನೆಯಷ್ಟೇ ಶಿವರಾಜ್ ಕುಮಾರ್ ನಾಯಕರಾಗಿರುವ ಘೋಸ್ಟ್ ಸಿನಿಮಾದ ಟ್ರೈಲರ್ ಲಾಂಚ್ ಆಗಿ ಅದ್ಭುತ ಪ್ರತಿಕ್ರಿಯೆ ಪಡೆದಿತ್ತು. ಇದೇ ತಿಂಗಳು 19 ರಂದು ಚಿತ್ರ ತೆರೆಗೆ ಬರುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿರು ಕೊನೆಯ ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ಭಾವುಕರಾದ ಧ್ರುವ ಸರ್ಜಾ, ಮೇಘನಾ