Webdunia - Bharat's app for daily news and videos

Install App

ಜೇಮ್ಸ್ ವಿವಾದದ ನಡುವೆಯೇ ಸಿಎಂ ಬೊಮ್ಮಾಯಿ ಭೇಟಿಯಾದ ಶಿವರಾಜ್ ಕುಮಾರ್ ದಂಪತಿ

Webdunia
ಗುರುವಾರ, 24 ಮಾರ್ಚ್ 2022 (11:35 IST)
ಬೆಂಗಳೂರು: ಜೇಮ್ಸ್ ಸಿನಿಮಾವನ್ನು ಥಿಯೇಟರ್ ನಿಂದ ಕಿತ್ತು ಹಾಕುವ ಬಗ್ಗೆ ಒತ್ತಡಗಳು ಬರುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ ಇಂದು ಶಿವರಾಜ್ ಕುಮಾರ್ ದಂಪತಿ ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾಗಿದ್ದಾರೆ.

ಜೇಮ್ಸ್ ಕಿತ್ತು ಹಾಕಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರದರ್ಶನ ಮಾಡಲು ಕೆಲವು ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಖುದ್ದಾಗಿ ಫಿಲಂ ಚೇಂಬರ್ ಗೆ ಕರೆ ಮಾಡಿ ಜೇಮ್ಸ್ ತೆಗೆಯದಂತೆ ಸೂಚನೆ ನೀಡಿದ್ದರು.

ಅಲ್ಲದೆ, ಏನಾದರೂ ಸಮಸ್ಯೆಯಿದ್ದರೆ ಭೇಟಿಯಾಗುವಂತೆ ಶಿವರಾಜ್ ಕುಮಾರ್ ಗೆ ಹೇಳಿರುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದರ ನಡುವೆಯೇ ಇಂದು ಶಿವಣ್ಣ, ಗೀತಾ ಶಿವರಾಜ್ ಕುಮಾರ್ ಮತ್ತು ಜೇಮ್ಸ್ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿದ್ದಾರೆ. ಶಕ್ತಿಧಾಮದ ಕಾರ್ಯಕ್ರಮಕ್ಕೆ ಸಿಎಂರನ್ನು ಆಹ್ವಾನಿಸಲು ಈ ಭೇಟಿ ನಡೆದಿದೆ. ಇದೇ ಸಂದರ್ಭದಲ್ಲಿ ಜೇಮ್ಸ್ ಗೆ ಏನೇ ಸಮಸ್ಯೆಯಾದರೂ ಫಿಲಂ ಚೇಂಬರ್ ಗೆ ಹೇಳಿ. ನಮ್ಮ ಕಡೆಯಿಂದ ನಾವು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments