ರವಿಚಂದ್ರನ್ ಸಿನಿಮಾದ ಟೈಟಲ್ ಟ್ರ್ಯಾಕ್ ಹಾಡಿದ ಶಿವರಾಜ್ ಕುಮಾರ್

Webdunia
ಬುಧವಾರ, 24 ನವೆಂಬರ್ 2021 (09:55 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಕನ್ನಡಿಗ ಸಿನಿಮಾದ ಟೈಟಲ್ ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಡಿದ್ದಾರೆ. ಈ ಹಾಡನ್ನು ಕಿಚ್ಚ ಸುದೀಪ್ ಲಾಂಚ್ ಮಾಡಿರುವುದು ಇನ್ನೊಂದು ವಿಶೇಷ.

‘ಸಿರಿಗನ್ನಡಂ ಏಳ್ಗೆ, ಕನ್ನಡಂ ಬಾಳ್ಗೆ’ ಎಂದು ಆರಂಭವಾಗುವ ಸಾಲಿನ ಈ ಹಾಡನ್ನು ಶಿವಣ್ಣ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ವಿಶೇಷವಾಗಿ ಈ ಹಾಡು ಶಿವಣ್ಣ ಇದುವರೆಗೆ ಹಾಡಿರುವ ಹಾಡಿಗಿಂತ ಕೊಂಚ ಭಿನ್ನವಾಗಿದೆ. ಹೈ ಪಿಚ್ ಹಾಡನ್ನು ಶಿವಣ್ಣ ಅದ್ಭುತವಾಗಿ ಹಾಡಿರುವುದು ಸ್ವತಃ ಕಿಚ್ಚ ಸುದೀಪ್ ಗೇ ಅಚ್ಚರಿ ಉಂಟುಮಾಡಿದೆ.

ಹಾಡು ಬಿಡುಗಡೆ ಮಾಡಿದ ಬಳಿಕ ಒಬ್ಬ ಲೆಜೆಂಡ್ ನಟನಿಗೆ ಇನ್ನೊಬ್ಬ ಲೆಜೆಂಡ್ ನಟ ಧ್ವನಿ ನೀಡಿರುವುದು ಸಾಮಾನ್ಯ ಸಂಗತಿಯಲ್ಲ. ಈ ಹಾಡು ಕಷ್ಟಕರವಾಗಿದೆ. ಆದರೆ ಶಿವಣ್ಣ ಅದ್ಭುತವಾಗಿ ಹಾಡಿದ್ದಾರೆ. ಎಲ್ಲರೂ ಕೇಳಿ ಪ್ರೋತ್ಸಾಹಿಸಿ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments