Webdunia - Bharat's app for daily news and videos

Install App

ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ಶಿವರಾಜ್ ಕುಮಾರ್ ಹೇಳಿದ ಒಂದೇ ಒಂದು ಹೇಳಿಕೆ ವಿವಾದಕ್ಕೆ ಕಾರಣವಾಯ್ತು!

Webdunia
ಮಂಗಳವಾರ, 26 ಮಾರ್ಚ್ 2019 (09:13 IST)
ಬೆಂಗಳೂರು: ಮಂಡ್ಯದಲ್ಲಿ ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ಗಳ ನಡುವೆ ಚುನಾವಣಾ ಕಣ ರಂಗೇರಿದೆ. ಇಂತಹಾ ಹೊತ್ತಿನಲ್ಲಿ ಇತ್ತೀಚೆಗೆ ನೀವು ಯಾರ ಪರ ಪ್ರಚಾರ ಮಾಡುತ್ತೀರಿ ಎಂದು ಸ್ಯಾಂಡಲ್ ವುಡ್ ತಾರೆಯರಿಗೆ ಇತ್ತೀಚೆಗೆ ಪ್ರಶ್ನೆಗಳು ಎದುರಾಗುವುದು ಸಾಮಾನ್ಯ.


ಈಗಾಗಲೇ ದರ್ಶನ್, ಯಶ್ ಸುಮಲತಾ ಪರ ನಿಂತಿದ್ದಾರೆ. ಪುನೀತ್ ರಾಜ್ ಕುಮಾರ್ ರಾಜಕೀಯಕ್ಕೂ ನನಗೂ ಆಗಿಬರಲ್ಲ ಎಂದಿದ್ದಾರೆ. ಆದರೆ ಶಿವರಾಜ್ ಕುಮಾರ್ ಗೆ ಇದೇ ಪ್ರಶ್ನೆ ಕೇಳಿದಾಗ ಅವರು ಕೊಟ್ಟ ಉತ್ತರ ವಿವಾದಕ್ಕೆ ಕಾರಣವಾಗಿದೆ.

ನಾನು ಯಾರ ಪರವಾಗಿಯೂ ಪ್ರಚಾರ ಮಾಡಲ್ಲ. ಯಾರೂ ನನ್ನನ್ನು ಕರೆದೂ ಇಲ್ಲ. ರಾಜಕೀಯಕ್ಕೆ ಹೋಗಲು ತುಂಬಾ ಬುದ್ಧಿವಂತಿಕೆ ಬೇಕು. ನಾನು ಅಷ್ಟೊಂದು ಬುದ್ಧಿವಂತ ಅಲ್ಲ. ನನಗೆ ರಾಜಕೀಯ ಬೇಡ. ಹಿಂದೆ ನನ್ನ ಪತ್ನಿ ಸ್ಪರ್ಧಿಸಿದ್ದಾಳೆಂದು ಒಮ್ಮೆ ಮಾತ್ರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಆದರೆ ಈಗ ಶಿವಮೊಗ್ಗದಲ್ಲಿ ಮಧು ಪರ ನನ್ನ ಪತ್ನಿ ಗೀತಾ ಪ್ರಚಾರಕ್ಕೆ ಹೋಗಬಹುದು. ಆದರೆ ನಾನು ಹೋಗಬೇಕು ಅಂತ ಅವರೂ ನಿರೀಕ್ಷೆ ಮಾಡಲ್ಲ, ನಾನು ಹೋಗಲ್ಲ. ಜನರಿಗೆ ಬೇಕಾದ ಅಭ್ಯರ್ಥಿಯನ್ನು ಗೆಲ್ಲಿಸಲಿ ಎಂದು ಶಿವಣ್ಣ ಹೇಳಿದ್ದರು.

ಆದರೆ ಶಿವಣ್ಣ ಹೇಳಿಕೆಗೆ ಬೇರೆಯೇ ಅರ್ಥ ಕಲ್ಪಿಸಿ ಕೆಲವು ಮಾದ್ಯಮಗಳಲ್ಲಿ ವರದಿಯಾದವು. ಇದು ವಿವಾದಕ್ಕೆ ಕಾರಣವಾಯಿತು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಮಾನಿಗಳು ಶಿವಣ್ಣ ಪರವಾಗಿ ಮಾತನಾಡಿದ್ದು, ಶಿವಣ್ಣ ಹೋಗುತ್ತಿರುವ ದಾರಿ ಸರಿಯಾಗಿದೆ ಎಂದು ಬೆಂಬಲ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ಮುಂದಿನ ಸುದ್ದಿ
Show comments