Publish Date: Wed, 08 Apr 2020 (11:12 IST)
Updated Date: Wed, 08 Apr 2020 (11:13 IST)
ಬೆಂಗಳೂರು: ತಮ್ಮ ಮತ್ತು ತಮ್ಮ ಕುಟುಂಬದ ಹೆಸರಿನಲ್ಲಿ ಅನ್ನದಾನ ಮಾಡುತ್ತಿರುವ ಎಲ್ಲಾ ಅಭಿಮಾನಿಗಳಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧನ್ಯವಾದ ಸಲ್ಲಿಸಿದ್ದಾರೆ.
ಕೊರೋನಾದಿಂದಾಗಿ ಲಾಕ್ ಡೌನ್ ಆಗಿರುವ ಹಿನ್ನಲೆಯಲ್ಲಿ ಬಹುತೇಕರು ಊಟವಿಲ್ಲದೇ ಪರದಾಡುತ್ತಿದ್ದಾರೆ. ಇಂತಹ ಬಡವರ ನೆರವಿಗೆ ನಿಂತಿರುವ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಡಾ. ರಾಜ್ ಅಭಿಮಾನಿ ಬಳಗದವರಿಗೆ ಶಿವಣ್ಣ ಧನ್ಯವಾದ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋ ಸಂದೇಶ ನೀಡಿರುವ ಶಿವರಾಜ್ ರಾಜ್ಯದ ಹಲವೆಡೆ ತಮ್ಮ ಹಾಗೂ ತಮ್ಮ ಕುಟುಂಬದವರ ಹೆಸರು ಹೇಳಿಕೊಂಡು ಪ್ರತಿನಿತ್ಯ ಅನ್ನದಾನ ಮಾಡುತ್ತಿರುವ ಅಭಿಮಾನಿಗಳನ್ನು ನೋಡಿ ಖುಷಿಯಾಗುತ್ತಿದೆ. ಎಲ್ಲರಿಗೂ ಎಷ್ಟು ಕೃತಜ್ಞತೆ ಹೇಳಿದರೂ ಕಡಿಮೆಯೇ ಎಂದಿದ್ದಾರೆ.