Webdunia - Bharat's app for daily news and videos

Install App

ಕಬ್ಜ ಸಿನಿಮಾ ತಂಡದ ಬಗ್ಗೆ ಶಿವಣ್ಣ ಅಸಮಾಧಾನ ಹೊರಹಾಕಿದ್ದೇಕೆ?

Webdunia
ಶುಕ್ರವಾರ, 13 ಅಕ್ಟೋಬರ್ 2023 (09:20 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಕಬ್ಜ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದ ಶಿವಣ್ಣ ಚಿತ್ರತಂಡದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಶಿವಣ್ಣ ನಾಯಕರಾಗಿರುವ ಘೋಸ್ಟ್ ಸಿನಿಮಾ ಹಿಂದಿಯಲ್ಲಿ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ್ದಾರೆ. ‘ಕಬ್ಜ ಬಳಿಕ ನಮ್ಮ ಸಿನಿಮಾವನ್ನು ಹಿಂದಿಗೆ ತೆಗೆದುಕೊಂಡು ಹೋಗುವುದು ಕಷ್ಟವಾಗುತ್ತಿದೆ. ಚಂದ್ರು ಮೇಲೆ ನನಗೆ ದೂರಿಲ್ಲ, ಆದರೂ ಕಬ್ಜನಲ್ಲಿ ನನ್ನ ಪಾತ್ರವನ್ನು ಹೈಲೈಟ್ ಮಾಡಿ ತಪ್ಪು ಮಾಡಿದರು. ಜೈಲರ್ ಸಿನಿಮಾದಲ್ಲಿ ನನ್ನದು ಅತಿಥಿ ಪಾತ್ರ. ಅಲ್ಲಿ ಎಷ್ಟು ಬೇಕೋ ಅಷ್ಟು ತೋರಿಸಿದರು. ಆದರೆ ಕಬ್ಜದಲ್ಲಿ ನನ್ನದು ಅತಿಥಿ ಪಾತ್ರವಾದರೂ ಹೈಲೈಟ್ ಮಾಡಿಬಿಟ್ಟರು.

ನಾನು ಉಪೇಂದ್ರ, ಸುದೀಪ್ ನಟಿಸಿದ್ದಾರೆ ಎಂದು ನಟಿಸಲು ಒಪ್ಪಿಕೊಂಡೆ. ಆದರೆ ನನ್ನನ್ನೂ ಹೈಲೈಟ್ ಮಾಡಿ ಸಿನಿಮಾ ಕೊಳ್ಳುವವರನ್ನು ಮಿಸ್ ಲೀಡ್ ಮಾಡಿದರು. ಸಿನಿಮಾ ಬಿಡುಗಡೆಯಾದಾಗ ತಮಿಳುನಾಡಿನಲ್ಲಿ ಶೂಟಿಂಗ್ ನಲ್ಲಿದ್ದೆ. ವಾಪಸ್ ಬರುವಾಗ ಯಾರೋ ಒಬ್ಬರು ಸಿನಿಮಾ ಮೇಲೆ ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದೆವು. ಆದರೆ ನಿರಾಸೆಯಾಯಿತು. ನೀವು ಬರೀ ಒಂದು ಸೀನ್ ನಲ್ಲಿ ಬಂದು ಹೋಗುತ್ತೀರಿ ಎಂದರು. ನನಗೆ ಯಾಕೋ ಸರಿ ಬರಲಿಲ್ಲ. ಅತಿಥಿ ಪಾತ್ರಗಳನ್ನು ಜಾಣತನದಿಂದ ಬಳಸಿಕೊಳ್ಳಬೇಕು. ಅತಿಥಿ ಪಾತ್ರಗಳ ಕಟೌಟ್ ಹಾಕಿ ಪ್ರಚಾರ ಮಾಡಿ ಮಿಸ್ ಲೀಡ್ ಮಾಡಬಾರದು’ ಎಂದಿದ್ದಾರೆ ಶಿವಣ್ಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments