Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿ ಭೇಟಿಯಾಗಿ ಒಟ್ಟಿಗೇ ಊಟ ಸವಿದ ಶಿವರಾಜ್ ಕುಮಾರ್

Krishnaveni K
ಸೋಮವಾರ, 5 ಫೆಬ್ರವರಿ 2024 (09:57 IST)
Photo Courtesy: Twitter
ಹೈದರಾಬಾದ್: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಿನ್ನೆ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಿವಾಸಕ್ಕೆ ಭೇಟಿ ನೀಡಿ ಜೊತೆಯಾಗಿ ಊಟ ಸವಿದಿದ್ದಾರೆ.

ಚಿರಂಜಿವಿ ಕುಟುಂಬ ಮತ್ತು ಡಾ.ರಾಜ್ ಕುಟುಂಬಕ್ಕೆ ಮೊದಲಿನಿಂದಲೂ ಸ್ನೇಹವಿದೆ. ಪುನೀತ್ ರಾಜ್ ಕುಮಾರ್ ನಿಧನರಾದಾಗ ಚಿರಂಜೀವಿ ಪುತ್ರ ರಾಮ್ ಚರಣ್ ಬೆಂಗಳೂರಿಗೆ ಬಂದು ಅಂತಿಮ ದರ್ಶನ ಪಡೆದಿದ್ದರು. ಚಿರಂಜೀವಿ ಕೂಡಾ ಶಿವಣ್ಣನ ಜೊತೆ ಈ ಹಿಂದೆಯೂ ಹಲವು ಬಾರಿ ಆತ್ಮೀಯವಾಗಿ ಕಾಲ ಕಳೆದಿದ್ದರು. ಇದೀಗ ಚಿರಂಜೀವಿ ನಿವಾಸಕ್ಕೆ ಶಿವಣ್ಣ ಭೇಟಿ ನೀಡಿ ಅವರ ಕುಟುಂಬದವರ ಜೊತೆ ಕೆಲವು ಕಾಲ ಕಳೆದು ಒಟ್ಟಿಗೇ ಊಟ ಮಾಡಿ ಬಂದಿದ್ದಾರೆ.

ಶಿವಣ್ಣ-ಮೆಗಾಸ್ಟಾರ ಭೇಟಿಯಾಗಿದ್ದೇಕೆ?
ಇತ್ತೀಚೆಗಷ್ಟೇ ಮೆಗಾಸ್ಟಾರ್ ಚಿರಂಜೀವಿಗೆ ಕೇಂದ್ರ ಸರ್ಕಾರ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಸಿನಿಮಾದಲ್ಲಿನ ಅವರ ಸಾಧನೆಗಾಗಿ ಈ ಉನ್ನತ ನಾಗರಿಕ ಪ್ರಶಸ್ತಿ ನೀಡಲಾಗಿತ್ತು. ಈ ಕಾರಣಕ್ಕೆ ಮೆಗಾಸ್ಟಾರ್ ನಿವಾಸಕ್ಕೆ ಭೇಟಿ ನೀಡಿದ ಶಿವಣ್ಣ ಹೂಗುಚ್ಚ ನೀಡಿ ಅಭಿನಂದಿಸಿದ್ದಾರೆ. ಶಿವಣ್ಣನಿಗೆ ತಾವೇ ಕೈಯಾರೆ ಊಟ ಬಡಿಸಿ ಮೆಗಾಸ್ಟಾರ್ ಫ್ಯಾಮಿಲಿ ಉಪಚರಿಸಿದೆ. ಇಬ್ಬರ ಫೋಟೋ ಅಭಿಮಾನಿಗಳ ಗಮನ ಸೆಳೆದಿದೆ.

ಚಿರು ಮತ್ತು ಸ್ಯಾಂಡಲ್ ವುಡ್ ನಂಟು ಈ ಹಿಂದಿನಿಂದಲೂ ಇದೆ. ಹಿಂದೊಮ್ಮೆ ಚಿರಂಜೀವಿ ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಸ್ನೇಹಕ್ಕೆ ಸ್ನೇಹ ಹಾಡಿನಲ್ಲಿ ಕುಣಿದಿದ್ದು ಯಾರು ಮರೆಯಲು ಸಾಧ್ಯ? ಇದೀಗ ಮತ್ತೆ ಅವರು ಕನ್ನಡ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ ಎಂಬು ಸುದ್ದಿಗಳಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ

Prithwi Bhat marriage: ಸರಿಗಮಪ ಸಿಂಗರ್ ಪೃಥ್ವಿ ಭಟ್ ಮದುವೆ ವಿವಾದ: ಮನೆ ಬಿಟ್ಟು ಹೋಗಿದ್ದಕ್ಕೆ ಕಾರಣ ಹೇಳಿದ ಗಾಯಕಿ

ಮುಂದಿನ ಸುದ್ದಿ
Show comments