ದರ್ಶನ್ ಫ್ಯಾನ್ಸ್‌ ತಂದುಕೊಟ್ಟ ಫೋಟೋ ಇಟ್ಟು ಪೂಜೆ ಮಾಡಿದ ಅರ್ಚಕರಿಗೆ ಕಾದಿತ್ತು ಶಾಕಿಂಗ್ ನ್ಯೂಸ್

Sampriya
ಮಂಗಳವಾರ, 6 ಆಗಸ್ಟ್ 2024 (17:52 IST)
Photo Courtesy X
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಅವರು ಆದಷ್ಟು ಬೇಗ ಹೊರಬರಲೆಂದು ಅವರ ಮನೆಯವರು, ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಪತ್ನಿ ವಿಜಯಲಕ್ಷ್ಮೀ ಅವರು ಕಾನೂನು ಹೋರಾಟದ ಜತೆ ದೇವರ ಮೊರೆ ಹೋಗಿ ಜೈಲಿನಲ್ಲಿರುವ ಪತಿಗೆ ಸಂಕಷ್ಟ ನಿವಾರಣೆಯಾಗಲೆಂದು ಬೇಡಿಕೊಳ್ಳುತ್ತಿದ್ದಾರೆ.

ಇನ್ನೊಂದೆಡೆ ದರ್ಶನ್ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಜೈಲಿನಿಂದ ಹೊರಬಂದು ಆದಷ್ಟು ಬೇಗ ಅವರ ಸಿನಿಮಾಗಳನ್ನು ಬೆಳ್ಳಿತೆರೆ ಮೇಲೆ ನೋಡುವಂತಾಗಲಿ ಎಂದು ಹರಸುತ್ತಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿಗಳು ತಮ್ಮ ಊರಿನಲ್ಲಿ ಜಪ, ವ್ರತ ಮಾಡುತ್ತಿದ್ದಾರೆ. ಹೀಗೇ ನಿನ್ನೆ ಶ್ರಾವಣ ಸೋಮವಾರದಂದು ದರ್ಶನ್ ಬಿಡುಗಡೆಗಾಗಿ ಬಳ್ಳಾರಿಯಲ್ಲಿ ದೇವರ ವಿಗ್ರಹದ ಬಳಿ ದರ್ಶನ್‌ ಫೋಟೋ ಇಟ್ಟು ಪೂಜೆ ಮಾಡಲಾಗಿದ್ದು, ಇದೀಗ ಈ ಪೂಜೆ ಅರ್ಚಕರಿಗೆ ಸಂಕಷ್ಟ ತಂದೊಟ್ಟಿದೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದೊಡ್ಡಬಸವೇಶ್ವರ ದೇವರ ಪ್ರಾಣ ಮೂರ್ತಿ ಮುಂದೆ ಅರ್ಚಕರು ನಟ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ.  ದರ್ಶನ್ ಅವರ ಮುಂದಿನ ಸಿನಿಮಾ 'ಡೆವಿಲ್‌' ಎಂದು ಬರೆದಿರುವ ಪೋಸ್ಟರ್‌ ಸೇರಿದಂತೆ ದರ್ಶನ್‌ ವಿವಿಧ ಫೋಟೋಗಳನ್ನು ದೇವರ ಮುಂದೆ ಇಟ್ಟು ಕುಂಕುಮ ಹಚ್ಚಿ ಪೂಜೆ ಮಾಡಿ, ಮಂಗಳಾರತಿ ಎತ್ತಲಾಗಿದೆ.

ಈ ನಡೆಗೆ ಭಕ್ತರು ಆಕ್ರೋಶ ಹೊರಹಾಕಿದ್ದು, ಅದರಂತೆ ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಅವರು ಅರ್ಚಕರನ್ನು ಅಮಾನತು ಮಾಡಿದ್ದಾರೆ. ಈ ಸಂಬಂಧ ವಿಚಾರಣೆ ಮುಗಿಯುವವರೆಗೂ ದೇವಸ್ಥಾನದಲ್ಲಿ ಪೂಜೆ ನೆರವೇರಿಸದಂತೆ ಸವರಿಗೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಕಸಿ ಮಾಡಿಸಿದ್ದ ಸ್ತನ ತೆಗೆದ ಶೆರ್ಲಿನ್ ಚೋಪ್ರಾ, ಕಾರಣ ಹೀಗೇ ಬರೆದುಕೊಂಡಿದ್ದಾರೆ

ಹೇಮಾ ಮಾಲಿನಿಯನ್ನು ವರಿಸಲು ಧರ್ಮವನ್ನೇ ಬದಲಾಯಿಸಿದ್ರಾ ಧರ್ಮೇಂದ್ರಾ

ಮುಂದಿನ ಸುದ್ದಿ
Show comments