Webdunia - Bharat's app for daily news and videos

Install App

ಪತಿ ಸಾವಿನ ದುಃಖದಲ್ಲಿರುವ ಮಾಲಾಶ್ರೀಗೆ ಶ್ರುತಿ ಸಾಂತ್ವನಿಸಿದ್ದು ಹೀಗೆ

Webdunia
ಗುರುವಾರ, 29 ಏಪ್ರಿಲ್ 2021 (10:18 IST)
ಬೆಂಗಳೂರು: ಪತಿ, ನಿರ್ಮಾಪಕ ರಾಮು ಕೊರೋನಾದಿಂದಾಗಿ ಅಕಾಲಿಕವಾಗಿ ಸಾವನ್ನಪ್ಪಿದ ದುಃಖದಲ್ಲಿರುವ ನಟಿ ಮಾಲಾಶ್ರೀಗೆ ಚಿತ್ರರಂಗದ ಗೆಳತಿ, ನಟಿ ಶ್ರುತಿ ಸಾಂತ್ವನಿಸಿದ್ದಾರೆ.

 

ಮಾಲಾಶ್ರೀಗೆ ಸುದೀರ್ಘ ಪತ್ರ ಬರೆದಿರುವ ಶ್ರುತಿ ಮಾಲಾಶ್ರೀಯನ್ನು ಸಾಂತ್ವನಿಸುವ ಕೆಲಸ ಮಾಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಶ್ರುತಿ ಪ್ರಕಟಿಸಿದ್ದಾರೆ.

‘ನಿಮ್ಮ ಸಹೋದ್ಯೋಗಿಯಾಗಿ, ಗೆಳತಿಯಾಗಿ ನಿಮ್ಮನ್ನು ಸಾಂತ್ವನಿಸಲಾಗದ ಪರಿಸ್ಥಿತಿಯಲ್ಲಿ ನೋಡಲಾಗದೇ ಕನಿಷ್ಠ ಕಣ್ಣೀರನ್ನು ಒರೆಸಲು ಸಾಧ‍್ಯವಾಗದ ಕ್ರೂರ ಪರಿಸ್ಥಿತಿಗೆ ನನ್ನದೊಂದು ಧಿಕ್ಕಾರ. ಮಾಲಾ, ನಿಮಗಾದ ನಷ್ಟವನ್ನು ಭರಿಸಲು ಯಾರಿಂದಲೂ ಸಾಧ್ಯವಾಗದು. ಆದರೆ ನಿಮ್ಮ ಕೋಟ್ಯಾನುಕೋಟಿ ಅಭಿಮಾನಿಗಳಿಗಾಗಿ, ಮುದ್ದು ಮಕ್ಕಳಿಗಾಗಿ ಕಷ್ಟದ ದಿನಗಳನ್ನು ಧೈರ್ಯವಾಗಿ ಎದುರಿಸುವ ಅನಿವಾರ್ಯತೆಯಿದೆ. ಚಿತ್ರರಂಗದಲ್ಲಿ ಸೂಪರ್ ಸ್ಟಾರ್ ಆಗಿ ಮೆರೆದಿದ್ದು ಕೇವಲ ಅದೃಷ್ಟದಿಂದಲ್ಲ. ನಿಮ್ಮ ಪರಿಶ್ರಮದಿಂದ. ನಂತರ ಒಬ್ಬರ ಉತ್ತಮ ಗೃಹಿಣಿಯಾಗಿದ್ದು ಕೇವಲ ದೇವರ ವರದಿಂದಲ್ಲ. ತ್ಯಾಗ, ಸಹನೆ, ಪ್ರೀತಿಯಿಂದ, ಒಳ್ಳೆ ತಾಯಿ ಆಗಲೂ ಅಷ್ಟೇ ಶ್ರಮ, ಪ್ರಯತ್ನ ಇರುತ್ತದೆ. ಹೀಗೆ ಜೀವನದ ಎಲ್ಲಾ ಏರಿಳಿತಗಳನ್ನೂ ನಿಭಾಯಿಸಿಕೊಂಡು ಬಂದಿದ್ದೀರಿ. ರಾಮು ಅವರಿಲ್ಲದ  ಮುಂದಿನ ದಿನಗಳು ನಿಮಗೆ ಕಷ್ಟಕರವಾಗಿದ್ದರು ಅದನ್ನು ನಿಭಾಯಿಸುತ್ತೀರಿ ಹಾಗೂ ನಿಭಾಯಿಸುವ ಶಕ್ತಿ ದೇವರು ಕರುಣಿಸಲಿ. ಕಷ್ಟದ ಹಾದಿಯಲ್ಲಿ ಎಂದಾದರೂ ಸಹಾಯ ಬೇಕಿದ್ದಲ್ಲಿ ನಾನು ಒಂದೇ ಒಂದು ಕರೆಯಷ್ಟೇ ದೂರದಲ್ಲಿರುವೆ’ ಎಂದು ಶ್ರುತಿ ಸುದೀರ್ಘ ಪತ್ರದ ಮೂಲಕ ಗೆಳತಿಗೆ ಸಾಂತ್ವನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments