Select Your Language

Notifications

webdunia
webdunia
webdunia
webdunia

ಮಹಿಳಾ ರೋಗಿಗೆ ಚಿಕಿತ್ಸೆ ನೀಡದ ವೈದ್ಯರು: ಆಸ್ಪತ್ರೆ ವಿರುದ್ಧ ನಟಿ ಶ್ವೇತಾ ಆರ್ ಪ್ರಸಾದ್ ಕಿಡಿ

ಮಹಿಳಾ ರೋಗಿಗೆ ಚಿಕಿತ್ಸೆ ನೀಡದ ವೈದ್ಯರು: ಆಸ್ಪತ್ರೆ ವಿರುದ್ಧ ನಟಿ ಶ್ವೇತಾ ಆರ್ ಪ್ರಸಾದ್ ಕಿಡಿ
ಬೆಂಗಳೂರು , ಶುಕ್ರವಾರ, 17 ಏಪ್ರಿಲ್ 2020 (09:25 IST)
ಬೆಂಗಳೂರು: ಮಹಿಳಾ ರೋಗಿಗೆ ಮಧ್ಯರಾತ್ರಿ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ರಾಧಾ ರಮಣ ಧಾರವಾಹಿ ಖ್ಯಾತಿಯ ನಟಿ ಶ್ವೇತಾ ಆರ್ ಪ್ರಸಾದ್ ಕಿಡಿ ಕಾರಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆಯೊಂದನ್ನು ನೋವಿನಿಂದಲೇ ಹಂಚಿಕೊಂಡಿರುವ ನಟಿ, ಇಂತಹ ವೈದ್ಯರು, ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಬಿ ಶ್ರೀರಾಮುಲು ಹೆಸರು ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.

ಮೊನ್ನೆ ಮಧ್ಯರಾತ್ರಿ 12.00 ರಿಂದ 3.30 ರ ಒಳಗೆ ನಡೆದ ಘಟನೆ ಇದು. ಇಬ್ಬರು ಮಕ್ಕಳ ತಾಯಿ 32 ವರ್ಷದ ಮಹಿಳೆಯೊಬ್ಬರಿಗೆ ತುರ್ತಾಗಿ ವೈದ್ಯರ ಅಗತ್ಯವಿತ್ತು. ಈ ವೇಳೆ ಅವರನ್ನು ಯಾವ ಆಂಬ್ಯುಲೆನ್ಸ್ ಗಳೂ ಪಿಕಪ್ ಮಾಡಲಿಲ್ಲ. ಆಸ್ಪತ್ರೆಗೆ ಹೋದರೆ ಯಾವ ವೈದ್ಯರೂ ಆಕೆಗೆ ಚಿಕಿತ್ಸೆ ನೀಡಲು ಸಿದ್ಧವಿಲ್ಲ. ಕೊರೋನಾ ನೆಪದಲ್ಲಿ ಖಾಸಗಿ ವೈದ್ಯರು ಈ ರೀತಿ ಮಾಡುವುದು ಸರಿಯಲ್ಲ. ಒಂದು ವೇಳೆ ಆ ಮಹಿಳೆಗೆ ಏನಾದರೂ ಹೆಚ್ಚು ಕಡಿಮೆಯಾಗಿದ್ದರೆ ಯಾರು ಹೊಣೆ? ಇಂತಹ ಆಸ್ಪತ್ರೆ, ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ನಟಿ ಶ್ವೇತಾ ವಿಡಿಯೋ ಸಂದೇಶ ಮೂಲಕ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್ ಮದುವೆ ಮೇಲೆ ಹದ್ದಿನಗಣ್ಣು: ನಿಯಮ ತಪ್ಪಿದರೆ ದಂಡ ಗ್ಯಾರಂಟಿ