Webdunia - Bharat's app for daily news and videos

Install App

ಮಹಿಳಾ ರೋಗಿಗೆ ಚಿಕಿತ್ಸೆ ನೀಡದ ವೈದ್ಯರು: ಆಸ್ಪತ್ರೆ ವಿರುದ್ಧ ನಟಿ ಶ್ವೇತಾ ಆರ್ ಪ್ರಸಾದ್ ಕಿಡಿ

Webdunia
ಶುಕ್ರವಾರ, 17 ಏಪ್ರಿಲ್ 2020 (09:25 IST)
ಬೆಂಗಳೂರು: ಮಹಿಳಾ ರೋಗಿಗೆ ಮಧ್ಯರಾತ್ರಿ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ರಾಧಾ ರಮಣ ಧಾರವಾಹಿ ಖ್ಯಾತಿಯ ನಟಿ ಶ್ವೇತಾ ಆರ್ ಪ್ರಸಾದ್ ಕಿಡಿ ಕಾರಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆಯೊಂದನ್ನು ನೋವಿನಿಂದಲೇ ಹಂಚಿಕೊಂಡಿರುವ ನಟಿ, ಇಂತಹ ವೈದ್ಯರು, ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಬಿ ಶ್ರೀರಾಮುಲು ಹೆಸರು ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.

ಮೊನ್ನೆ ಮಧ್ಯರಾತ್ರಿ 12.00 ರಿಂದ 3.30 ರ ಒಳಗೆ ನಡೆದ ಘಟನೆ ಇದು. ಇಬ್ಬರು ಮಕ್ಕಳ ತಾಯಿ 32 ವರ್ಷದ ಮಹಿಳೆಯೊಬ್ಬರಿಗೆ ತುರ್ತಾಗಿ ವೈದ್ಯರ ಅಗತ್ಯವಿತ್ತು. ಈ ವೇಳೆ ಅವರನ್ನು ಯಾವ ಆಂಬ್ಯುಲೆನ್ಸ್ ಗಳೂ ಪಿಕಪ್ ಮಾಡಲಿಲ್ಲ. ಆಸ್ಪತ್ರೆಗೆ ಹೋದರೆ ಯಾವ ವೈದ್ಯರೂ ಆಕೆಗೆ ಚಿಕಿತ್ಸೆ ನೀಡಲು ಸಿದ್ಧವಿಲ್ಲ. ಕೊರೋನಾ ನೆಪದಲ್ಲಿ ಖಾಸಗಿ ವೈದ್ಯರು ಈ ರೀತಿ ಮಾಡುವುದು ಸರಿಯಲ್ಲ. ಒಂದು ವೇಳೆ ಆ ಮಹಿಳೆಗೆ ಏನಾದರೂ ಹೆಚ್ಚು ಕಡಿಮೆಯಾಗಿದ್ದರೆ ಯಾರು ಹೊಣೆ? ಇಂತಹ ಆಸ್ಪತ್ರೆ, ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ನಟಿ ಶ್ವೇತಾ ವಿಡಿಯೋ ಸಂದೇಶ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments