Webdunia - Bharat's app for daily news and videos

Install App

ಜೈಲಿನಲ್ಲಿ ದರ್ಶನ್ ಹೇಗಿದ್ದಾರೆ ಎಂದಾ ಸಿದ್ದರೂಢಗೆ ಸಂಕಷ್ಟ

Sampriya
ಭಾನುವಾರ, 28 ಜುಲೈ 2024 (10:58 IST)
Photo Courtesy X
ಬೆಂಗಳೂರು:  ಪರಪ್ಪನ ಅಗ್ರಹಾರದ ವಿಐಪಿ ಸೆಲ್‌ನಲ್ಲಿರುವ ನಟ ದರ್ಶನ್ ಅವರನ್ನು ಭೇಟಿಯಾಗಿ ಕೆಲಹೊತ್ತು ಮಾತನಾಡಿರುವುದಾಗಿ  ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಸಿದ್ದಾರೂಢಗೆ ಇದೀಗ ಸಂಕಷ್ಟ ಎದುರಾಗಿದೆ.

ಸನ್ನಡತೆ ಆಧಾರದಲ್ಲಿ ಹೊರಬಂದಿರುವ ಸಿದ್ಧಾರೂಢ ದರ್ಶನ್ ಭೇಟಿ ಬಗ್ಗೆ ಕತೆ ಕಟ್ಟಿ ಹೇಳಿರುವುದಾಗಿ ಅನುಮಾನ ವ್ಯಕ್ತವಾಗುತ್ತಿದೆ.

ಈಚೆಗೆ ಜೈಲಿನಿಂದ ಹೊರಬಂದಿರುವ ಸಿದ್ದಾರೂಢ ಅವರು ಮಾಧ್ಯಮಗಳ ಬಳಿ ನಾನು ದರ್ಶನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ವಿಐಪಿ ಸೆಲ್‌ನಲ್ಲಿ ಅವರು ನರಕ ಅನುಭವಿಸುತ್ತಿದ್ದಾರೆ. ಅವರಿಗೆ ಪಶ್ಚಾತ್ತಾಪ ಕಾಡುತ್ತಿದೆ. ಒಂಟಿತನದಿಂದ ಯಾರಾದರೂ ಮಾತಿಗೆ ಸಿಕ್ಕರೂ ಸಾಕು ಎಂಬ ಭಾವನೆಯಲ್ಲಿದ್ದಾರೆ. ನಾನು ಭೇಟಿಗೆ ಹೋದಾಗ ನನ್ನನ್ನು ತಬ್ಬಿಕೊಂಡು, ನನ್ನ ಬಗ್ಗೆ ತಿಳಿದುಕೊಂಡರು. ದರ್ಶನ್ ಭೇಟಿಗೆ ಅವಕಾಶ ನೀಡುವಂತೆ ಜೈಲಾಧಿಕಾರಿಗಳ ಬಳಿ ಕೇಳಿಕೊಂಡೆ. ಅದರಂತೆ ನನಗೆ ಭೇಟಿಗೆ ಅವಕಾಶ ಸಿಕ್ಕಿದೆ ಎಂದು ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿದ್ದರೂಢ ಅವರು ದರ್ಶನ್ ಸ್ಥಿತಿಗತಿ ಬಗ್ಗೆ ಹೇಳಿರುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಪರಿಶೀಲಿಸಿದಾಗ ಸಿದ್ದರೂಢ ಅವರಿಗೆ ದರ್ಶನ್ ಅವರ ಭೇಟಿಗೆ ಅವಕಾಶವೇ ನೀಡಿಲ್ಲ ಎಂದು ತಿಳಿದು. ಇದು ಸಿದ್ದರೂಢ ಕಟ್ಟಿದ ಕಟ್ಟುಕತೆ ಎಂದು ಹೇಳಲಾಗಿದೆ.

ಅಂದಹಾಗೆ, ಜುಲೈ 8ರಂದು ಸಿದ್ಧಾರೂಢ ಬಳ್ಳಾರಿ ಜೈಲಿನಿಂದ ಸೆಂಟ್ರಲ್ ಜೈಲಿಗೆ ಬಂದಿದ್ದರು. 18 ಗಂಟೆಗಳ ಕಾಲ ಜೈಲಿನಲ್ಲಿ  ಸಿದ್ಧರೂಢ ಇದ್ದಿದ್ದಾಗಿ ವರದಿಯಾಗಿದೆ. ಜು.9ರಂದು ಸನ್ನಡತೆಯ ಆಧಾರದ ಮೇಲೆಮ ಸಿದ್ದರೂಡ ಜೈಲಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಎರಡು ಕಡೆಯ ಜೈಲಾಧಿಕಾರಿಗಳಿಗೆ ಕಾರಾಗೃಹ ಇಲಾಖೆ ನೋಟಿಸ್ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments