Webdunia - Bharat's app for daily news and videos

Install App

ನಮ್ಮನೆ ಯುವರಾಣಿ ಅಂಕಿತಾ ಅಮರ್ ಗೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಫಿದಾ

Krishnaveni K
ಶುಕ್ರವಾರ, 23 ಆಗಸ್ಟ್ 2024 (13:51 IST)
ಬೆಂಗಳೂರು: ನಮ್ಮನೆ ಯುವರಾಣಿ ಧಾರವಾಹಿ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದ ನಟಿ ಅಂಕಿತಾ ಅಮರ್ ನಾಯಕಿಯಾಗಿರುವ ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಅಂಕಿತಾ ಅಭಿನಯಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಫಿದಾ ಆಗಿದ್ದಾರೆ.

ನಮ್ಮನೆ ಯುವರಾಣಿ ಧಾರವಾಹಿಯಲ್ಲಿ ಮೀರಾ ಆಗಿ ಅಂಕಿತಾ ತಮ್ಮ ಅಭಿನಯ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ಇದೀಗ ರಕ್ಷಿತ್ ಶೆಟ್ಟಿಯವರ ಪರಂವಾ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ವಿಹಾನ್ ಗೌಡಗೆ ನಾಯಕಿಯಾಗಿ ಅಂಕಿತಾ ಅಭಿನಯಿಸಿದ್ದಾರೆ.

ಈ ಸಿನಿಮಾದಲ್ಲಿ ಅಂಕಿತಾರದ್ದು ವಿಭಿನ್ನ ಪಾತ್ರವಾಗಿದೆ. ಸಿನಿಮಾದ ಟ್ರೈಲರ್ ನಿನ್ನೆ ಬಿಡುಗಡೆಯಾಗಿದೆ. ಟ್ರೈಲರ್ ಲಾಂಚ್ ವೇಳೆ ರಕ್ಷಿತ್ ಶೆಟ್ಟಿ ಅಂಕಿತಾ ಅಭಿನಯವನ್ನು ಭರಪೂರ ಕೊಂಡಾಡಿದ್ದಾರೆ. ಈ ಸಿನಿಮಾ ನೋಡಿದ ಬಳಿಕ ಅಂಕಿತಾಗೆ ಕರೆ ಮಾಡಿ ಆಕೆಯ ಅಭಿನಯವನ್ನು ಕೊಂಡಾಡಿದೆ. ಯಾಕೆಂದರೆ ಅಷ್ಟು ಅದ್ಭುತವಾಗಿ ಅಭಿನಯಿಸಿದ್ದಾರೆ. ಅವರ ಅಭಿನಯ ನೋಡುತ್ತಿದ್ದರೆ ಈ ವರ್ಷದ ಅತ್ಯುತ್ತಮ ನಟಿ ಪ್ರಶಸ್ತಿ ಅವರಿಗೇ ಸಿಗಬೇಕು ಎಂದಿದ್ದಾರೆ.

ಅಂಕಿತಾ ಪಾತ್ರ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಆಕೆ ಅಷ್ಟು ಅದ್ಭುತವಾಗಿ ನಿರ್ವಹಿಸಿದ್ದಾರೆ. ಇನ್ನು, ವಿಹಾನ್ ಕೂಡಾ ಅಷ್ಟೇ ಉತ್ತಮವಾಗಿ ನಟಿಸಿದ್ದಾನೆ. ಈ ಸಿನಿಮಾ ಜನರಿಗೆ ಇಷ್ಟವಾಗಬಹುದು ಎಂಬುದಕ್ಕೆ ನನಗೆ ಯಾವುದೇ ಅನುಮಾನವಿಲ್ಲ ಎಂದು ರಕ್ಷಿತ್ ಹೊಗಳಿದ್ದಾರೆ. ಅಂದ ಹಾಗೆ ಈ ಸಿನಿಮಾ ಸೆಪ್ಟೆಂಬರ್ 5 ಕ್ಕೆ ಥಿಯೇಟರ್ ಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments