Webdunia - Bharat's app for daily news and videos

Install App

'ಕೋಟಿಗೊಬ್ಬ-2'ರಲ್ಲಿ ಕಿಚ್ಚನಿಗೆ ಅವಕಾಶ ನೀಡಿದ ಸೂರಪ್ಪ ಬಾಬು

Webdunia
ಶುಕ್ರವಾರ, 24 ಏಪ್ರಿಲ್ 2015 (10:02 IST)
ನಿರ್ಮಾಪಕ ಸೂರಪ್ಪ ಬಾಬು ಅವರು ತಮ್ಮ ಮುಂದಿನ ಚಿತ್ರಕ್ಕೆ ಸುದೀಪ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೋಟಿಗೊಬ್ಬ ಚಿತ್ರದ ಎರಡನೇ ಭಾಗವನ್ನು ಸೂರಪ್ಪ ಬಾಬು ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಮೊದಲನೆಯ ಭಾಗ ಹದಿನಾಲ್ಕು ವರ್ಷಗಳ ಹಿಂದೆ ಬಿಡುಗಡೆ ಆಗಿತ್ತು. ಕೋಟಿಗೊಬ್ಬ ಮೊದಲ ಅವತರಣಿಕೆಯಲ್ಲಿ ಡಾ. ವಿಷ್ಣುವರ್ಧನ್ ಅವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದರು. 
ಈಗ ಇದರ ಎರಡನೇ ಭಾಗದ ಕೆಲಸಕ್ಕೆ ಜೀವ ಬಂದಿದೆ. ಈ ಪ್ರಾಜಕ್ಟ್ ಬಗ್ಗೆ 2012ರಲ್ಲಿಯೇ ಸುದ್ದಿ ಇದ್ದರೂ ಈಗ ಅದಕ್ಕೆ ಜೀವ ದೊರೆತಿದೆ. ಇದನ್ನು ಕಾಲಿವುಡ್ ಪ್ರಸಿದ್ಧ ನಿರ್ದೇಶಕ ಕೆ ಎಸ್ ರವಿಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. 
 
ಸುರೇಶ ಕೃಷ್ಣ ಈ ಚಿತ್ರದ ಕಥೆ ಬರೆದಿದ್ದಾರೆ. ಈ ಚಿತ್ರ ತಮಿಳು ಮೂಲದ ಬಾಷ ಚಿತ್ರದ ರೀಮೇಕ್. ತಮಿಳಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕನ್ನಡದಲ್ಲಿ ಡಾ. ವಿಷ್ಣುವರ್ಧನ್ ನಟಿಸಿದ್ದರು. ಈಗ ಕೋಟಿಗೊಬ್ಬ-2ರಲ್ಲಿ ಕಿಚ್ಚ ಸುದೀಪ್ ಅವಕಾಶ ಗಳಿಸಿದ್ದಾರೆ.  
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments