Publish Date: Tue, 08 Sep 2020 (09:25 IST)
Updated Date: Tue, 08 Sep 2020 (09:27 IST)
ಚೆನ್ನೈ: ಕೊರೋನಾದಿಂದಾದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಪುತ್ರ ಎಸ್ ಪಿ ಚರಣ್ ಹೇಳಿಕೆ ನೀಡಿದ್ದಾರೆ.
ಎಸ್ ಪಿಬಿ ಕೊರೋನಾ ವರದಿ ನೆಗೆಟಿವ್ ಬಂದಿದೆ. ಆದರೆ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಈಗಲೂ ತೀವ್ರ ನಿಗಾ ಘಟಕದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರೀಗ ಸಾಕಷ್ಟು ಚೇತರಿಸಿಕೊಂಡಿದ್ದಾರೆ. ಹಳೆಯ ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ. ಮುಂದೆ ಐಪಿಎಲ್ ನೋಡುವ ಆಸೆಯಿದೆ ಎಂದು ಚರಣ್ ಹೇಳಿಕೊಂಡಿದ್ದಾರೆ. ಈ ನಡುವೆ ಆಸ್ಪತ್ರೆಯಲ್ಲೇ ಅವರ ವಿವಾಹ ವಾರ್ಷಿಕೋತ್ಸವವನ್ನೂ ಸರಳವಾಗಿ ಆಚರಿಸಲಾಗಿದೆ ಎಂದು ಚರಣ್ ಹೇಳಿದ್ದಾರೆ.