Webdunia - Bharat's app for daily news and videos

Install App

ಕಾಂತಾರ ಅಧ್ಯಾಯ 1 ರ ಮುಹೂರ್ತ ನಡೆಯುವ ಜಾಗದ ವಿಶೇಷತೆ ಏನು ಗೊತ್ತಾ?

Webdunia
ಸೋಮವಾರ, 27 ನವೆಂಬರ್ 2023 (16:10 IST)
Photo Courtesy: Twitter
ಉಡುಪಿ: ಬಹುನಿರೀಕ್ಷಿತ ಸಿನಿಮಾ ಕಾಂತಾರ ಅಧ‍್ಯಾಯ 1 ರ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಆದರೆ ಮುಹೂರ್ತ ಕಾರ್ಯಕ್ರಮ ನಡೆದ ಜಾಗದ ವಿಶೇಷತೆ ಏನು ಗೊತ್ತಾ?

ಎರಡು ವರ್ಷದ ಹಿಂದೆ ಕಾಂತಾರ ಸಿನಿಮಾದ ಮುಹೂರ್ತ ನಡೆದಾಗ ಯಾರಿಗೂ ಇದು ಇಷ್ಟು ದೊಡ್ಡ ಮಟ್ಟದ ಯಶಸ್ಸು ನೀಡುತ್ತದೆ ಎಂದು ಗೊತ್ತಿರಲಿಲ್ಲ. ಕೊರೋನಾ ಹಾವಳಿ ನಡುವೆ ರಿಷಬ್ ಶೆಟ್ಟಿ ಮತ್ತು ತಂಡ ತಮ್ಮ ತವರು ಉಡುಪಿ-ಕುಂದಾಪುರದಲ್ಲಿಯೇ ಚಿತ್ರೀಕರಣ ಮುಗಿಸಿದ್ದರು.

ಆದರೆ ಅಂದು ಕಾಂತಾರ ಸಿನಿಮಾದ ಮುಹೂರ್ತ ಇಷ್ಟು ದೊಡ್ಡ ಸುದ್ದಿಯಾಗಿರಲಿಲ್ಲ. ಅಂದು ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲಂಸ್ ತಂಡ ಆನೆಗುಡ್ಡೆ ವಿನಾಯಕನ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ಪೂಜೆ ನೆರವೇರಿಸಿತ್ತು. ಆಗ ಅದಕ್ಕೆ ಹೆಚ್ಚು ಪ್ರಚಾರವೂ ಇರಲಿಲ್ಲ.

ಹಾಗಂತ ರಿಷಬ್ ತಮಗೆ ಯಶಸ್ಸು ಸಿಕ್ಕಿದ ದೇವಸ್ಥಾನವನ್ನು ಮರೆತಿಲ್ಲ. ಈ ಬಾರಿ ಕಾಂತಾರದ ಮತ್ತೊಂದು ಭಾಗದ ಸಿನಿಮಾದ ಮುಹೂರ್ತವನ್ನೂ ಅದೇ ವಿನಾಯಕನ ಸನ್ನಿಧಾನದಲ್ಲಿ ರಿಷಬ್ ಮತ್ತು ತಂಡ ನೆರವೇರಿಸಿದೆ. ಕಾಂತಾರ ಭರ್ಜರಿ ಯಶಸ್ವಿಯಾಗಿ ಪ್ಯಾನ್ ಇಂಡಿಯಾ ಮಟ್ಟಕ್ಕೆ ತಲುಪಿರುವುದರಿಂದ ಈ ಬಾರಿಯ ಮುಹೂರ್ತ ಕಾರ್ಯಕ್ರಮಕ್ಕೆ ಭಾರೀ ಪ್ರಚಾರ ಸಿಕ್ಕಿದೆ. ಅಷ್ಟೇ ಅಲ್ಲ, ಇದೇ ಜಾಗದಲ್ಲಿ ರಿಷಬ್ ಮೊದಲ ಬಾರಿಗೆ ಪತ್ನಿ ಪ್ರಗತಿ ಶೆಟ್ಟಿಯನ್ನು ನೋಡಿದ್ದು ಎಂದು ಅವರೇ ಹೇಳಿಕೊಂಡಿದ್ದಾರೆ. ಹೀಗಾಗಿ ರಿಷಬ್ ಗೂ ಈ ದೇವಾಲಯ ಸ್ಪೆಷಲ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments