Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಟಿ ಮಯೂರಿ ದಾಂಪತ್ಯದಲ್ಲೂ ವಿರಸ ಸುದ್ದಿ

Krishnaveni K
ಗುರುವಾರ, 4 ಜುಲೈ 2024 (10:04 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಮಯೂರಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳಿಗೆ ಈಗ ಅವರೇ ಬ್ರೇಕ್ ಹಾಕಿದ್ದಾರೆ. ಅಷ್ಟಕ್ಕೂ ಇಂತಹದ್ದೊಂದು ಸುದ್ದಿ ಹರಡಲು ಕಾರಣವಾಗಿದ್ದು ಅವರ ಸೋಷಿಯಲ್ ಮೀಡಿಯಾ ಪೇಜ್.

ಕಿರುತೆರೆಯ ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಮಯೂರಿ ಸ್ಯಾಂಡಲ್ ವುಡ್ ನಲ್ಲಿ ಕೃಷ್ಣಲೀಲಾ, ಕರಿಯಾ 2, ಇಷ್ಟಕಾಮ್ಯ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಸಿನಿ ರಸಿಕರಿಗೆ ಚಿರಪರಿಚಿತರಾಗಿದ್ದಾರೆ. ಇದೀಗ ಕಿರುತೆರೆಯಲ್ಲಿ ನನ್ನ ದೇವರು ಎನ್ನುವ ಧಾರವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.

ಇತ್ತೀಚೆಗೆ ನಟಿ ಮಯೂರಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹಬ್ಬಿತ್ತು. ಚಂದನ್ ಶೆಟ್ಟಿ, ಯುವರಾಜ್ ಕುಮಾರ್ ದಾಂಪತ್ಯ ವಿರಸದ ಬಳಿಕ ಈ ದಂಪತಿಯ ಸುದ್ದಿ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಇದಕ್ಕೆ ಕಾರಣವಾಗಿದ್ದು, ಮಯೂರಿ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಪತಿ ಅರುಣ್ ಜೊತೆಗಿನ ಫೋಟೋಗಳನ್ನು ಡಿಲೀಟ್ ಮಾಡಿದ್ದು.

ಆದರೆ ಇಂತಹದ್ದೊಂದು ಸುದ್ದಿ ಹಬ್ಬುತ್ತಿದ್ದಂತೇ ಸ್ಪಷ್ಟನೆ ನೀಡಿದ ಮಯೂರಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಫೋಟೋ ಡಿಲೀಟ್ ಮಾಡಿದ ತಕ್ಷಣ ಈಗೆಲ್ಲಾ ದಂಪತಿ ನಡುವೆ ಸರಿಯಿಲ್ಲ ಎಂದೇ ಜನ ಅಂದುಕೊಳ್ಳುತ್ತಿದ್ದಾರೆ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಇಂತಹ ಸುದ್ದಿಗಳೆಲ್ಲಾ ಸುಳ್ಳು ಎಂದಿದ್ದಾರೆ.

ಮಯೂರಿ ಮತ್ತು ಅರುಣ್ ಕುಮಾರ್ 10 ವರ್ಷಗಳಿಂದ ಪ್ರೀತಿಸಿ ನಾಲ್ಕು ವರ್ಷಗಳ ಹಿಂದಷ್ಟೇ ಮನೆಯವರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಇದೀಗ ಓರ್ವ ಪುತ್ರನೂ ಇದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments