Webdunia - Bharat's app for daily news and videos

Install App

ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ಶ್ರೀಲೀಲಾ: ತಿರುಪತಿ ತಿಮ್ಮಪ್ಪನ ದರ್ಶನ

Sampriya
ಬುಧವಾರ, 26 ಜೂನ್ 2024 (14:39 IST)
Photo Courtesy X
ಬೆಂಗಳೂರು: ಕನ್ನಡದ ಶ್ರೀಲೀಲಾ ಇದೀಗ ಫುಲ್‌ ಬ್ಯೂಸಿ ಆಗಿದ್ದಾರೆ. ಟಾಲಿವುಡ್ ಬಳಿಕ ಬಾಲಿವುಡ್‌ನಲ್ಲೂ ಬಿಗ್ ಚಾನ್ಸ್ ಸಿಕ್ಕಿದೆ. ವರುಣ್ ಧವನ್ ಹೊಸ ಸಿನಿಮಾಗೆ ನಾಯಕಿಯಾಗಿ ಶ್ರೀಲೀಲಾ ಆಯ್ಕೆಯಾಗಿದ್ದಾರೆ.

ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ಬೆನ್ನಲ್ಲೇ ಶ್ರೀಲೀಲಾ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿಗೆ ನಟಿ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ

ಬಾಲಿವುಡ್‌ನಿಂದ ಉತ್ತಮ ಅವಕಾಶಗಳು ನಟಿಗೆ ಅರಸಿ ಬರುತ್ತಿವೆ. ಹಾಗಾಗಿ ತಾಯಿ ಸ್ವರ್ಣಲತಾ ಜೊತೆ ಶ್ರೀಲೀಲಾ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.  

ಶ್ರೀಲೀಲಾ ನಟಿಸಲಿರುವ ಬಾಲಿವುಡ್‌ ಚಿತ್ರ ಪಕ್ಕಾ ಕಾಮಿಡಿ ಡ್ರಾಮಾ ಸಿನಿಮಾ ಆಗಿದ್ದು, ವರುಣ್ ತಂದೆ ಡೇವಿಡ್ ಧವನ್ ನಿರ್ದೇಶನ ಮಾಡಲಿದ್ದಾರೆ. ಜುಲೈ ಕೊನೆಯಲ್ಲಿ ಶೂಟಿಂಗ್ ಶುರುವಾಗಲಿದ್ದು, ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಇನ್ನೂ ನಿತಿನ್ ಜೊತೆ ರಾಬಿನ್‌ಹುಡ್ ಸಿನಿಮಾ ಮಾಡುತ್ತಿರೋದು ಅಧಿಕೃತ ಘೋಷಣೆ ಆಗಿದೆ. ರವಿತೇಜ ಜೊತೆ ಸಿನಿಮಾಗೆ ಚಾಲನೆ ಸಿಕ್ಕಿದೆ. ಪವನ್ ಕಲ್ಯಾಣ್ ಜೊತೆಗಿನ ಉಸ್ತಾದ್ ಭಗತ್ ಸಿಂಗ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಕನ್ನಡದ ಜ್ಯೂನಿಯರ್ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲು ಸಿದ್ಧತೆ ಮಾಡಿಕೊಳ್ತಿದೆ ಚಿತ್ರತಂಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments