Select Your Language

Notifications

webdunia
webdunia
webdunia
webdunia

ಭಗೀರ ಸಿನಿಮಾದ ಬ್ಯುಸಿ ಮಧ್ಯೆ ಕಟೀಲು ಅಮ್ಮನ ದರ್ಶನ ಪಡೆದ ನಟ ಶ್ರೀಮುರುಳಿ

ಭಗೀರ ಸಿನಿಮಾದ ಬ್ಯುಸಿ ಮಧ್ಯೆ ಕಟೀಲು ಅಮ್ಮನ ದರ್ಶನ ಪಡೆದ ನಟ ಶ್ರೀಮುರುಳಿ

Sampriya

ಮಂಗಳೂರು , ಮಂಗಳವಾರ, 8 ಅಕ್ಟೋಬರ್ 2024 (16:42 IST)
Photo Courtesy X
ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಅವರು ಕಥೆ ಬರೆದಿರುವ, ಡಾ. ಸೂರಿ ನಿರ್ದೇಶನದ ಭಗೀರ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಶ್ರೀಮುರುಳಿ ಅವರು ಇಂದು ಕಟೀಲು  ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈಚೆಗೆ ಪುತ್ತೂರಿನಲ್ಲಿ ನಡೆದ  ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀಮುರುಳಿ ಅವರು ನಿನ್ನೆ ಮುರುಡೇಶ್ವರಕ್ಕೆ ತೆರಳಿದ್ದರು.

ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ನಟ ಶ್ರೀಮುರಳಿ ವಿಶೇಷ ಪೂಜೆ ಸಲ್ಲಿಸಿದರು. ಆ ನಂತರ ಕ್ಷೇತ್ರದ ವತಿಯಿಂದ ಶ್ರೀಮುರಳಿಗೆ ವೆಂಕಟರಮಣ ಆಸ್ರಣ್ಣ ಅವರು ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.

ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಶ್ರೀಮುರುಳಿ ಅವರು,  ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ. ನಾನು ಬಾಲ್ಯದಲ್ಲಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಇದೀಗ ಮತ್ತೆ ಇಲ್ಲಿಗೆ ಬರುವ ಅವಕಾಶ ಸಿಕ್ಕಿದೆ. ಸದ್ಯದಲ್ಲೇ ನಾನು ನಟಿಸಿರುವ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.

ಇದೀಗ ನಟ ಶ್ರೀಮುರುಳಿ ಅಭಿನಯದ ಬಹುನಿರೀಕ್ಷಿತ ಭಗೀರ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಇನ್ನೂ ಹೆಚ್ಚಿನ ದೃಶ್ಯದ ಶೂಟಿಂಗ್ ಕರಾವಳಿಯಲ್ಲೇ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

BigBoss Season 11: ಐಶ್ವರ್ಯ- ಭವ್ಯ ಗೌಡ ನಾಮಿನೇಷನ್‌ ಕಿಚ್ಚು