Webdunia - Bharat's app for daily news and videos

Install App

ಅರ್ಜುನ್ ಸರ್ಜಾ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಶೃತಿ ಮಾಡಿದ ಆರೋಪಗಳೇನು?

Webdunia
ಭಾನುವಾರ, 21 ಅಕ್ಟೋಬರ್ 2018 (17:32 IST)
ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಆರೋಪಗಳ ಸುರಿಮಳೆ ಸುರಿಸಿದ್ದಾರೆ.

ಘಟನೆ ನಡೆದಾಗ ನನಗೆ ಹೇಳಿಕೊಳ್ಳುವ ಧೈರ್ಯವಿರಲಿಲ್ಲ. ಈಗ ಧೈರ್ಯ ಬಂದಿದೆ. ಅದಕ್ಕೇ ಹೇಳುತ್ತಿದ್ದೇನೆ. ನಾನು ಈ ಘಟನೆಯಿಂದ ಸಾಕಷ್ಟು ನೊಂದಿದ್ದೇನೆ ಎಂದು ಶೃತಿ ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲ, ಅರ್ಜುನ್ ಸರ್ಜಾ ಎಂಬ ಹೆಸರು ನೋಡಿ ತೀರ್ಮಾನಕ್ಕೆ ಬರಬೇಡಿ, ಅವರ ತಪ್ಪು ಏನು ಎಂಬುದನ್ನು ನೋಡಿ. ನಾನು ಅವರ ಮೇಲೆ ಆರೋಪ ಮಾಡಿದ ಮೇಲೆ ಹಲವು ಬೆದರಿಕೆ ಕರೆಗಳು ನನಗೆ ಬರುತ್ತಿವೆ. ಎಲ್ಲದರ ವಿರುದ್ಧವೂ ಕಾನೂನು ಹೋರಾಟ ಮಾಡುತ್ತೇನೆ ಎಂದು ಶೃತಿ ಖಚಿತಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ಶೂಟಿಂಗ್ ಮುಗಿದ ಮೇಲೆ ಡಿನ್ನರ್ ಗೆ ಬರುವಂತೆ ಹಲವು ಬಾರಿ ಕರೆದಿದ್ದರು. ಆದರೆ ಪ್ರತೀ ಬಾರಿಯೂ ನಾನು ನಿರಾಕರಿಸಿದ್ದೆ ಎಂದು ಶೃತಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಇದೀಗ ಶೃತಿ ಹರಿಹರನ್ ಗೆ ಇನ್ನೊಬ್ಬ ನಟಿ ನೀತೂ ಬೆಂಬಲ ಸೂಚಿಸಿದ್ದಾರೆ. ತಮಗೂ ಇಂತಹ ಹಲವು ಅನುಭವಗಳಾಗಿವೆ. ಒಂದೆರಡು ಕಹಿ ಅನುಭವವಾಗಿದೆ. ಆದರೆ ಹೆಸರು ಬಹಿರಂಗಪಡಿಸಿದರೆ ನೀವು ನಂಬಲ್ಲ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ  ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.   

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ