Webdunia - Bharat's app for daily news and videos

Install App

ಸಂಜನಾ ಕ್ಷಮೆ ಕೇಳಿದ್ದರ ಹಿಂದೆ ಏನೋ ಇದೆ ಎಂದ ಶೃತಿ ಹರಿಹರನ್

Webdunia
ಗುರುವಾರ, 15 ನವೆಂಬರ್ 2018 (09:49 IST)
ಬೆಂಗಳೂರು: ಮೀ ಟೂ ಅಭಿಯಾನದಡಿಯಲ್ಲಿ ಗಂಡ ಹೆಂಡತಿ ಸಿನಿಮಾ ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಆರೋಪ ಮಾಡಿ ಕೊನೆಗೆ ಕ್ಷಮೆ ಯಾಚಿಸಿದ ನಟಿ ಸಂಜನಾ ನಡೆ ಹಿಂದೆ ಬೇರೇನೋ ಇದೆ ಎಂದು ನಟಿ ಶೃತಿ ಹರಿಹರನ್ ಆರೋಪಿಸಿದ್ದಾರೆ.

ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಅಭಿಯಾನದಡಿಯಲ್ಲಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಶೃತಿ, ಸಂಜನಾ ನಡೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಆಕೆ ಒತ್ತಡಕ್ಕೆ ಒಳಗಾಗಿ ಕ್ಷಮೆ ಯಾಚಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

‘ನಾನೆಂದೂ ಸಂಜನಾ ರೀತಿ ಕ್ಷಮೆ ಕೇಳಲಾರೆ. ಸಂಜನಾ ಕ್ಷಮೆ ಕೇಳಿದ್ದನ್ನು ನೋಡಿ ನಿಜಕ್ಕೂ ಬೇಸರವಾಯಿತು. ಆಕೆಯ ಮನಸ್ಥಿತಿ ಹೇಗಿರಬಹುದು ಎಂದು ತಿಳಿದುಕೊಂಡೆ. ಇದರ ಹಿಂದೆ ಇನ್ನೇನೋ ಇದೆ’ ಎಂದು ಶೃತಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಶೃತಿ-ಸರ್ಜಾ ಪ್ರಕರಣದಲ್ಲಿ ನ.28 ರವರೆಗೆ ಅರ್ಜುನ್ ಸರ್ಜಾರನ್ನು ಬಂಧಿಸದಂತೆ ಹೈಕೋರ್ಟ್ ಆದೇಶಿಸಿದೆ. ಈ ನಡುವೆ ನಟಿ ಶೃತಿ ಅರ್ಜುನ್ ಸರ್ಜಾ ವಿರುದ್ಧ ಮಹಿಳಾ ಆಯೋಗಕ್ಕೆ ಭೇಟಿ ನೀಡಿ ತಮ್ಮ ಆರೋಪಗಳಿಗೆ ಪುರಾವೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ