Webdunia - Bharat's app for daily news and videos

Install App

ಟಾಲಿವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಸಮಂತಾ ಕುರಿತ ಹೇಳಿಕೆ: ರಾಜಮೌಳಿ ಆಕ್ರೋಶ

Sampriya
ಶುಕ್ರವಾರ, 4 ಅಕ್ಟೋಬರ್ 2024 (14:06 IST)
Photo Courtesy X
ಹೈದರಾಬಾದ್‌: ನಟ ನಾಗಚೈತನ್ಯ ಮತ್ತು ನಟಿ ಸಮಂತಾ ರುತ್‌ ಪ್ರಭು ವಿಚ್ಛೇದನ ಕುರಿತು ತೆಲಂಗಾಣ ಸಚಿವೆ ಕೊಂಡಾ ಸುರೇಖಾ ನೀಡಿರುವ ವಿವಾದಾತ್ಮಕ ಹೇಳಿಕೆ  ಟಾಲಿವುಡ್‌ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿದೆ.

ಸಚಿವೆಯ ಹೇಳಿಕೆಯನ್ನು ಒಬ್ಬೊಬ್ಬರಾಗಿ ಖಡಕ್‌ ಮಾತಿನಲ್ಲಿ ಖಂಡಿಸುತ್ತಿದ್ದಾರೆ. ಸಚಿವೆಯ ವಿರುದ್ಧ ಖ್ಯಾತ ನಿರ್ದೇಶಕ ಎಸ್‌.ಎಸ್. ರಾಜಮೌಳಿ ಕಿಡಿಕಾರಿದ್ದಾರೆ.

ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನಕ್ಕೆ ಬಿಆರ್‌ಎಸ್‌ ನಾಯಕ ಕೆ.ಟಿ. ರಾಮರಾವ್‌ ಕಾರಣ ಎಂದು ಕೊಂಡಾ ಸುರೇಖಾ ಹೇಳಿಕೆ ನೀಡಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಅವರವರ ಗಡಿಗಳನ್ನು ಗೌರವಿಸಿ, ಘನತೆಯಿಂದ ವರ್ತಿಸಿ. ಆಧಾರವಿಲ್ಲದ ಆರೋಪಗಳು ಸಹಿಸಲಸಾಧ್ಯ. ಅದರಲ್ಲೂ ಸಾರ್ವಜನಿಕ ಸೇವೆಯಲ್ಲಿರುವವರು ಈ ರೀತಿ ಆರೋಪ ಮಾಡಿದಾಗಂತೂ ಹೇಗೆ ಸಹಿಸಬೇಕು? ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕೊಂಡಾ ಸುರೇಖಾ ಅವರ ಹೇಳಿಕೆಯನ್ನು ಚಿತ್ರರಂಗ ಸಹಿಸಿಕೊಳ್ಳುವುದಿಲ್ಲ ಎಂದು #FilmIndustryWillNotTolerate ಎಂಬ ಅಭಿಯಾನ ಬೆಂಬಲಿಸಿದ್ದಾರೆ.

ಕೊಂಡಾ ಸುರೇಖಾ ಅವರು ತಮ್ಮ ಹೇಳಿಕೆ ಹಿಂಪಡೆದು ಕ್ಷಮೆ ಕೇಳಿದರೂ ಈ ವಿಚಾರ ಸದ್ಯ ಟಾಲಿವುಡ್ ಹಾಗೂ ಆಂಧ್ರ, ತೆಲಂಗಾಣದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ.

ಏತನ್ಮಧ್ಯೆ ನಾಗಾರ್ಜುನ ಅವರು ಕೊಂಡಾ ಸುರೇಖಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕೇಸ್ ದಾಖಲಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments