ನಾನು, ಸುದೀಪ್ ಇನ್ಮುಂದೆ ಸ್ನೇಹಿತರಲ್ಲ ಎಂದು ಇತ್ತೀಚೆಗೆ ದರ್ಶನ್ ಮಾಡಿದ್ದ ಟ್ವೀಟ್ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಹೆಬ್ಬುಲಿ ಪ್ರಚಾರದಲ್ಲಿರುವ ಸುದೀಪ್ ನಿನ್ನೆ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಇವತ್ತು ಹುಬ್ಬಳ್ಳಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸುದೀಪ್ ಎರಡೇ ಮಾತುಗಳಲ್ಲಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ನಾನು ನಿನಗೆ ಮರ್ಯಾದೆ ಕೊಡುತ್ತೇನೆ. ನೀನೂ ನನಗೆ ಮರ್ಯಾದೆ ಕೊಡು ಎಂದು ನೇರಾನೇರ ಹೇಳಿದ್ದಾರೆ. ದರ್ಶನ್ ಟ್ವಿಟ್ ಬಳಿಕ ಸುದೀಪ್ ಕೋಪಗೊಂಡಿರುವುದು ಸ್ಪಷ್ಟವಾಗುತ್ತಿದೆ.
ಈ ಬಗ್ಗೆ ಸುದೀಪ್ ಸಾಂಸ್ಕೃತಿಕ ಪರಿಷತ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸುದೀಪ್ ತನ್ನದಲ್ಲದ ತಪ್ಪಿಗೆ ಬಲಿಯಾಗುತ್ತಿದ್ದಾರೆ ಎಂದು ತಿಳಿಸಿದೆ.