Webdunia - Bharat's app for daily news and videos

Install App

ರಾಷ್ಟ್ರಗೀತೆ ಹಾಡುವಾಗ ಸುದೀಪ್ ಮಾಡಿದ ತಪ್ಪು ,ಕಿಚ್ಚನ ಪ್ರತಿಕ್ರಿಯೆ ಹೀಗಿದೆ..!

Webdunia
ಸೋಮವಾರ, 16 ಆಗಸ್ಟ್ 2021 (14:33 IST)
75ನೇ ಸ್ವಾತಂತ್ರ್ಯ ದಿನಾಚರಣೆಯ  (75th Independence Day) ಸುಸಂದರ್ಭದಲ್ಲಿ, ನಿನ್ನೆ ಸಾಮಾಜಿಕ ಜಾಲತಾಣದ ಮೂಲಕ ಸೆಲೆಬ್ರಿಟಿಗಳು ವಿಶ್ ಮಾಡಿದ್ದರು. ಒಬ್ಬೊಬ್ಬರು ಒಂದೊಂದು ರೀತಿ ಶುಭ ಕೋರಿದ್ದಾರೆ. ಕೆಲವರು ತಮ್ಮ ವಿಡಿಯೋಗಳ ಮೂಲಕ ವಿಶ್ ಮಾಡಿದರೆ, ಕಿಚ್ಚ ಸುದೀಪ್   ರಾಷ್ಟ್ರಗೀತೆ  ಹಾಡುವ ವಿಡಿಯೋವನ್ನು ಹಂಚಿಕೊಂಡಿದ್ದರು.

ನಿನ್ನೆ ಸುದೀಪ್ ಅವರು ಹಂಚಿಕೊಂಡ ವಿಶೇಷ ವಿಡಿಯೋ ನೋಡಿದ ಅಭಿಮಾನಿಗಳು ಹಾಗೂ ನೆಟ್ಟಿಗರು ಮೆಚ್ಚಿಕೊಂಡಿದ್ದರು. ಆದರೆ ರಾಷ್ಟ್ರಗೀತೆ ಹಾಡುವಾಗ ಸುದೀಪ್ ಅವರು ಮಾಡಿರುವ ಒಂದು ತಪ್ಪು ನಂತರದಲ್ಲಿ ಟೀಕೆಗೆ ಗುರಿಯಾಯ್ತು. ಹೌದು, ನೆಟ್ಟಿಗರೊಬ್ಬರು ಸುದೀಪ್ ಅವರು ರಾಷ್ಟ್ರಗೀತೆ ಹಾಡುವಾಗ ಮಾಡಿರುವ ತಪ್ಪನ್ನು ಕಂಡು ಹಿಡಿದಿದ್ದಾರೆ. ಅದನ್ನು ಎತ್ತಿ ತೋರಿಸುತ್ತಾ ಕಮೆಂಟ್ ಮಾಡಿದ್ದಾರೆ. ಇದಾದ ನಂತರ ಸಾಕಷ್ಟು ಮಂದಿ ನಟ ಕಿಚ್ಚ ಸುದೀಪ್ ಅವರು ಮಾಡಿದ್ದು ತಪ್ಪು ಎಂದು ಟೀಕಿಸಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಗೀತೆ ಹಾಡುವ ವಿಡಿಯೋ ಹಂಚಿಕೊಳ್ಳುವ ಮೂಲಕ ವಿಶೇಷವಾಗಿ ವಿಶ್ ಮಾಡಿದ್ದ ಸುದೀಪ್ ಅವರಿಗೆ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್ ಮಾಡಿದ್ದಾರೆ. ಸುದೀಪ್ ಅವರು ರಾಷ್ಟ್ರಗೀತೆ ಹಾಡಿದ್ದನ್ನು ಮೆಚ್ಚಿಕೊಂಡಿದ್ದ ನೆಟ್ಟಿಗರಲ್ಲಿ ಬಹುತೇಕರು ಒಂದು ವಿಷಯವನ್ನು ಗಮನಿಸಿರಲಿಲ್ಲ.
ಕಿಚ್ಚ ಸುದೀಪ್ ಅವರ ಟ್ವೀಟ್ ಲಿಂಕ್
ಸಾಮಾನ್ಯವಾಗಿ ರಾಷ್ಟ್ರಗೀತೆಯನ್ನು 48-52 ಸೆಕೆಂಡ್ ಒಳಗೆ ಹಾಡಬೇಕು. ಆದರೆ ಸುದೀಪ್ ಅವರು ಹಂಚಿಕೊಂಡಿರುವ ವಿಡಿಯೋದಲ್ಲಿ 63-65 ಸೆಕೆಂಡ್ ಇದೆ. ಈ ತಪ್ಪನ್ನು ಗಮನಿಸಿದ ನೆಟ್ಟಿಗರೊಬ್ಬರು ಸರಿಯಾಗಿ ರಾಷ್ಟ್ರೀತೆ ಹಾಡಿ ಸರ್, ನಿಮ್ಮನ್ನು ತುಂಬಾ ಜನ ಹಿಂಬಾಲಿಸುತ್ತಾರೆ. ನೀವು ಟಾಪ್ ನಟ ಆಗಿರಬಹುದು. ಆದರೆ 48-52 ಸೆಕೆಂಡ್ಸ್ ಒಳಗೆ ಹಾಡಬೇಕು ಅನ್ನೋ ಸಾಮಾನ್ಯ ಜ್ಞಾನ ಕೂಡ ಇಲ್ವಾ ಎಂದು ಪ್ರಶ್ನಿಸಿದ್ದಾರೆ.
ನೆಟ್ಟಿಗರೊಬ್ಬರು ಮಾಡಿರುವ ಈ ಕಮಂಟ್ಗೆ ಸುದೀಪ್ ಅವರು ಪ್ರತಿಕ್ರಿಯಿಸಿರುವ ರೀತಿ ಈಗ ಮೆಚ್ಚುಗೆಗೆ ಪಾತ್ರವಾಗಿದೆ. ಹೌದು, ಸುದೀಪ್ ಅವರ ಪ್ರತಿಕ್ರಿಯೆ ಹೀಗಿದೆ... ನಿಮ್ಮ ಕಮೆಂಟ್ ತುಂಬಾ ಒರಟಾಗಿದೆ... ಆದರೂ ಒಪ್ಪಿಕೊಳ್ಳುತ್ತೇನೆ. ನನ್ನ ದೇಶದ ಮೇಲಿನ ಪ್ರೀತಿಯನ್ನು ನನಗೆ ತಿಳಿದಂತೆ ವ್ಯಕ್ತಪಡಿಸಿದ್ದೇನೆ ಎಂದಿದ್ದಾರೆ.
ಕಿಚ್ಚ ಸುದೀಪ್ ಅವರ ಲೆಟೆಸ್ಟ್ ಟ್ವೀಟ್ ಲಿಂಕ್
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಕಿಚ್ಚ ಸುದೀಪ್ ಅವರಿಗೆ ಟ್ವಿಟರ್ನಲ್ಲಿ 25 ಲಕ್ಷಕ್ಕೂ ಅಧಿಕ ಹಿಂಬಾಲಕರಿದ್ದಾರೆ. ಇನ್ನು ಕಿಚ್ಚ ಸುದೀಪ್ ತಮ್ಮ ಪ್ರತಿಯೊಬ್ಬ ಅಭಿಮಾನಿ ಮಾಡುವ ಟ್ವೀಟ್ಗೂ ಪ್ರತಿಕ್ರಿಯೆ ನೀಡುವ ಮೂಲಕ ಸದಾ ಸಂಪರ್ಕದಲ್ಲಿರುತ್ತಾರೆ. ಇನ್ನು ಇತ್ತೀಚೆಗಷ್ಟೆ ಸುದೀಪ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 8ರ ನಿರೂಪಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಕಿಚ್ಚ ಸುದೀಪ್ ಅವರ ಸಿನಿಮಾ ವಿಷಯಕ್ಕೆ ಬರುವುದಾದರೆ ಕೋಟಿಗೊಬ್ಬ 3 ಹಾಗೂ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ಗೆ ಸಜ್ಜಾಗಿದೆ. ಕೊರೋನಾ ಕಾಟ ಕಡಿಮೆಯಾಗಿ ಸಿನಿಮಾ ಮಂದಿರಗಳು ಪೂರ್ಣ ಪ್ರಮಾಣದಲ್ಲಿ ಸಿನಿಪ್ರಿಯರಿಗಾಗಿ ಬಾಗಿಲು ತೆರೆದಾಗ ಈ ಚಿತ್ರಗಳ ರಿಲೀಸ್ ದಿನಾಂಕ ಪ್ರಕಟಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ವಿಕ್ರಾಂತ್ ರೋಣ ಸಿನಿಮಾದಲ್ಲಿ ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಹ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments