Webdunia - Bharat's app for daily news and videos

Install App

ಮುಖ್ಯಮಂತ್ರಿಯಾಗಲು ನಿರ್ಧಾರ ಮಾಡಿದ ಕಿಚ್ಚ ಸುದೀಪ್

Webdunia
ಸೋಮವಾರ, 18 ಜೂನ್ 2018 (13:00 IST)
ಬೆಂಗಳೂರು : ಕನ್ನಡ ನಿರ್ಮಾಪಕರೆಲ್ಲಾ ಸೇರಿಕೊಂಡು  ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರನ್ನು ಮುಖ್ಯಮಂತ್ರಿ ಮಾಡಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ನಟ ಸುದೀಪ್ ಅವರು ಮುಖ್ಯಮಂತ್ರಿಯಾದರೆ ಈಗಾಗಲೇ ಮುಖ್ಯಮಂತ್ರಿ ಪಟ್ಟ ಅಲಂಕರಿಸಿರುವ ಕುಮಾರಸ್ವಾಮಿ ಅವರು ಏನಾದರೂ ಎಂದು ಚಿಂತಿಸಬೇಡಿ. ಯಾಕೆಂದರೆ ಸುದೀಪ್ ಅವರು ಮುಖ್ಯಮಂತ್ರಿಯಾಗಲಿರುವುದು ಸಿನಿಮಾದಲ್ಲಿ. ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸೂಪರ್ ಹಿಟ್ `ಭರತ್ ಆನೇ ನೇನು' ಸಿನಿಮಾ ಕನ್ನಡಕ್ಕೆ ರಿಮೇಕ್ ಆಗೋಕೆ ರೆಡಿಯಾಗಿದೆ. ‘ಭರತ್ ಆನೇ ನೇನು' ಸಿನಿಮಾದಲ್ಲಿ ಮಹೇಶ್‍ಬಾಬು ಅವರು ಸಿಎಂ ಪಟ್ಟವನ್ನು ಅಲಂಕರಿಸಿ ಸಮಾಜದ ಇಡೀ ವ್ಯವಸ್ಥೆಯನ್ನ ಬದಲಾವಣೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ. ಈ ಪಾತ್ರವನ್ನುಕನ್ನಡದಲ್ಲಿ ಸುದೀಪ್ ಅವರು ಮಾಡಲಿದ್ದಾರಂತೆ. ಇದಕ್ಕೆ ಹಲವು ನಿರ್ಮಾಪಕರು ಮುಂದಾಗಿದ್ದು ‘ಭರತ್ ಅನ್ನೋ ನಾನು' ಟೈಟಲ್ ಇಡೋಕೆ ಕೂಡ ಅವರು ನಿರ್ಧರಿಸಿದ್ದಾರಂತೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments