Webdunia - Bharat's app for daily news and videos

Install App

ರೈತರ ಹೋರಾಟಕ್ಕೆ ಹೊಸ ಮೆರಗು ತಂದ ಕಿಚ್ಚ

Webdunia
ಶುಕ್ರವಾರ, 4 ಸೆಪ್ಟಂಬರ್ 2015 (09:30 IST)
ಕಿಚ್ಚ ಸುದೀಪ್ ನಟನೆಯಲ್ಲಿ ಚಕ್ರವರ್ತಿ ಹೇಗೋ ಹಾಗೆ ಹೋರಾಟದಲ್ಲೂ ಸಾಮ್ರಾಟನೆ. ಇದೀಗ ಸುದೀಪ್ ಮಹಾದಾಯಿ ಹೋರಾಟದಲ್ಲಿ ಧುಮುಕಿದ್ದಾರೆ. ಐತಿಹಾಸಿಕ ಪಟ್ಟಣ ನರಗುಂದದಲ್ಲಿ ನಡೆಯುತ್ತಿರೋ ಮಹದಾಯಿ ನದಿ ಜೋಡನೆ ಹೋರಾಟದಲ್ಲಿ ಇಂದು ರೈತರೊಡನೆ ಭಾಗಿಯಾಗಿದ್ರು. ಅಷ್ಟೇ ಅಲ್ಲದೆ ಅನ್ನದಾತರ ಹೋರಾಟಕ್ಕೆ ತನ್ನ ಬೆಂಬಲವನ್ನ ಸೂಚಿಸಿದ್ರು. 
ರೈತರು ನಡೆಸುತ್ತಿರುವ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಕಿಚ್ಚ ಸುದೀಪ್, ಚಿತ್ರರಂಗವು ಕೂಡ ರೈತರೊಡನೆ ಸದಾ ಬೆಂಬಲವಾಗಿ ನಿಲ್ಲುತ್ತದೆ. ರೈತರು ಕುಡಿಯುವ ನೀರನ್ನು ಕೇಳುತ್ತಿದ್ದಾರೆ ಹೊರತು ಬೇರೇನನ್ನೂ ಅಲ್ಲ. ಮನುಷ್ಯನು ಊಟವಿಲ್ಲದಿದ್ದರೆ ಬದುಕಬಹುದು, ಆದರೆ ನೀರಿಲ್ಲದಿದ್ದರೆ ಬದುಕಲಾರ. ಈ ಬಗ್ಗೆ ಸರ್ಕಾರವು ಗಮನಹರಿಸಿ ರೈತರ ಸಂಕಷ್ಟಕ್ಕೆ ಸಹಕರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
 
ಸುದೀಪ್ ಪ್ರತಿಭಟನಾ ಸ್ಥಳಕ್ಕೆ ಬರುತ್ತಿರುವ ವಿಷಯ ತಿಳಿದು ಸುದೀಪ್ ಅವರನ್ನು ನೋಡಲು ಸಾವಿರಾರು ಜನರು ಆಗಮಿಸಿದ್ದರು. ನೆರೆದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ನಿನ್ನೆಯಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಸುದೀಪ್ ಅವರಿಗೆ ಅಭಿಮಾನಿಗಳು ಪ್ರೀತಿಯಿಂದ ಅನ್ನದಾತರಿಗೆ ಅನ್ನದಾತ ಅನ್ನೋ ಬಿರುದನ್ನು ನೀಡಿದ್ದರು. ಈ ಬಿರುದಿಗೆ ತಕ್ಕಂತೆ ಕಿಚ್ಚ ಅನ್ನದಾತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಕಿಚ್ಚನ ಹೃದಯ ವೈಶಾಲ್ಯತೆಯನ್ನ ತೋರಿಸಿತ್ತು.
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments