ದರ್ಶನ್ ಮತ್ತು ಸುದೀಪ್ ವಿವಾದ ಬಗೆಹರಿಸಿ ಎಂದ ಅಭಿಮಾನಿಗೆ ಸುಮಲತಾ ಅಂಬರೀಷ್ ಕೊಟ್ಟ ಉತ್ತರವಿದು

Webdunia
ಮಂಗಳವಾರ, 14 ಮಾರ್ಚ್ 2017 (08:07 IST)
ಬೆಂಗಳೂರು(ಮಾ.14.): ಸ್ಯಾಂಡಲ್ ವುಡ್`ನ ಸೂಪರ್ ಸ್ಟಾರ್`ಗಳಾದ ಸುದೀಪ್ ಮತ್ತು ದರ್ಶನ್ ನಡುವಿನ ವಿವಾದ ಬಿರುಗಾಳಿ ಬಂದುಹೋಗಿದ್ದು, ಎಲ್ಲರಿಗೂ ಗೊತ್ತೇ ಇದೆ. ಚಲನಚಿತ್ರ ರಂಗದ ಹಿರಿಯ ನಟ ಅಂಬರೀಷ್ ಒಬ್ಬರಿಂದ ಮಾತ್ರ ಅವರಿಬ್ಬರ ನಡುವೆ ಉಂಟಾಗಿರುವ ಮನಸ್ತಾಪ ಬಗೆಹರಿಸಲು ಸಾಧ್ಯ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಂತೆ ಕುಮಾರ್ ಎಂಬ ಅಭಿಮಾನಿ ದರ್ಶನ್ ಮತ್ತು ಸುದೀಪ್ ಅವರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಅಂಬರೀಶ್ ಮನವೊಲಿಸಿ ಎಂದು ಸುಮಲತಾ ಅಂಬರೀಷ್ ಅವರಿಗೆ ಟ್ವೀಟ್ ಮಾಡಿದ್ದಾನೆ.

ಅಭಿಮಾನಿಯ ಟ್ವಿಟ್`ಗೆ ಉತ್ತರಿಸಿರುವ ಸುಮಲತಾ ಅಂಬರೀಷ್, ಸುದೀಪ್ ಮತ್ತು ದರ್ಶನ್ ಇಬ್ಬರೂ ಪ್ರಭುದ್ಧರು. ಸರಿಯೋ ತಪ್ಪೋ ಅವರಿಬ್ಬರೂ ಒಂದು ನಿರ್ಧಾರ ಕೈಗೊಂಡಿದ್ದಾರೆ ಅದನ್ನ ಗೌರವಿಸೋಣ ಎನ್ನುವ ಮೂಲಕ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂಬುದನ್ನ ಪರೋಕ್ಷವಾಗಿ ಹೇಳಿದ್ದಾರೆ.

ಮೆಜೆಸ್ಟಿಕ್ ಚಿತ್ರದಲ್ಲಿ ನಟಿಸುವಂತೆ ನನಗೆ ಮೊದಲು ಆಫರ್ ಬಂದಿತ್ತು. ನಾನು ಈಗಲೇ ನಟಿಸಲು ಸಾಧ್ಯವಿಲ್ಲ ದರ್ಶನ್ ಅವರಿಗೆ ಅವಕಾಶ ನೀಡುವಂತೆ ಸೂಚಿಸಿದ್ದೆ ಎಂದು ಸುದೀಪ್ ಟಿವಿಯೊಂದರ ಸಂದರ್ಶನದಲ್ಲಿ ಹೇಳಿದ್ದ ಮಾತು ಸುದೀಪ್ ಪಿತ್ತ ನೆತ್ತಿಗೇರುವಂತೆ ಮಾಡಿತ್ತು. ಬಳಿಕ ಟ್ವೀಟ್ ಮಾಡಿದ್ದ ದರ್ಶನ್ ನಾವಿಬ್ಬರೂ ಸ್ನೇಹಿತರಲ್ಲ ಎಂದುಬಿಟ್ಟಿದ್ದರು.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮುಂದಿನ ಸುದ್ದಿ
Show comments