Webdunia - Bharat's app for daily news and videos

Install App

ದರ್ಶನ್ ಗಾಗಿ ಪವರ್ ಫುಲ್ ಸ್ಥಳಕ್ಕೆ ಭೇಟಿ ಕೊಟ್ಟ ಮದರ್ ಇಂಡಿಯಾ ಸುಮಲತಾ

Krishnaveni K
ಶುಕ್ರವಾರ, 2 ಆಗಸ್ಟ್ 2024 (14:34 IST)
ಬೆಂಗಳೂರು: ದೊಡ್ಮಗ ದರ್ಶನ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದರೆ ಇತ್ತ ಮದರ್ ಇಂಡಿಯಾ ಸುಮಲತಾ ಈಗ ಪವರ್ ಫುಲ್ ಜಾಗಕ್ಕೆ ಭೇಟಿ ನೀಡಿ ಮಗನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಎರಡು ತಿಂಗಳಾಗುತ್ತಾ ಬಂದಿದೆ. ನಿನ್ನೆಯಷ್ಟೇ ಕೋರ್ಟ್ ದರ್ಶನ್ ಗೆ ಆಗಸ್ಟ್ 14 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿತ್ತು. ಈ ನಡುವೆ ಇಂದು ಸುಮಲತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ಸ್ಥಳಕ್ಕೆ ಭೇಟಿ ನೀಡಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ದರ್ಶನ್ ಬಂಧನವಾದಾಗಿನಿಂದಲೂ ಸುಮಲತಾ ಸೋಷಿಯಲ್ ಮೀಡಿಯಾಗಳಿಂದ, ಮಾಧ್ಯಮಗಳಿಂದ ದೂರವೇ ಇದ್ದಾರೆ. ಒಮ್ಮೆ ಮಾತ್ರ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಯಾವತ್ತಿದ್ದರೂ ನನ್ನ ಮಗನೇ. ಅವನು ನಿರ್ದೋಷಿಯಾಗಿ ಹೊರಬರಲಿ ಎಂಬುದೇ ನನ್ನ ಆಸೆ ಎಂದಿದ್ದರು.

ಇದೀಗ ದರ್ಶನ್ ಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗುತ್ತಿದ್ದಂತೇ ಇತ್ತ ಸುಮಲತಾ ಶಿರಡಿ ಸಾಯಿಬಾಬ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸಾಯಿ ಬಾಬ ಮಂದಿರಕ್ಕೆ ಹೋಗಿರುವ ಫೋಟೋಗಳನ್ನು ಹಂಚಿಕೊಂಡಿರುವ ಸುಮಲತಾ ಬಾಬನ ಆಶೀರ್ವಾದ ಯಾವತ್ತೂ ನಮ್ಮ ಮೇಲಿರಲಿ ಎಂದು ಬೇಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments