Webdunia - Bharat's app for daily news and videos

Install App

ಅಂಬಿ-ವಿಷ್ಣು ಸ್ನೇಹಕ್ಕೆ ಮಸಿ ಬಳಿಯಬೇಡಿ: ಸುಮಲತಾ ಮನವಿ

Webdunia
ಮಂಗಳವಾರ, 30 ಜೂನ್ 2020 (09:57 IST)
ಬೆಂಗಳೂರು: ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ವಿಷ್ಣುವರ್ಧನ್ ಸ್ಮಾರಕವನ್ನು ವಿನಾಕಾರಣ ಕೆದಕಿ ವಿವಾದವೆಬ್ಬಿಸುತ್ತಿರುವವರಿಗೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದರೂ ಹಲವರಿಗೆ ಸಮಾಧಾನವಾದಂತಿಲ್ಲ.


ವಿಷ್ಣು  ಸ್ಮಾರಕ ಕಾರ್ಯ ಈಗಾಗಲೇ ಆರಂಭವಾಗಿದೆ ಎಂದು ನೀಲನಕ್ಷೆ ಸಮೇತ ಸುಮಲತಾ ಪ್ರತಿಕ್ರಿಯಿಸಿದ ಹೊರತಾಗಿಯೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವಿಷ್ಣು-ಅಂಬರೀಶ್ ನಡುವಿನ ಸ್ನೇಹದ ವಿಚಾರವನ್ನು ಪ್ರಸ್ತಾಪಿಸಿ ವಿವಾದ ಮಾಡುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ಮತ್ತೆ ತಿರುಗೇಟು ನೀಡಿರುವ ಸುಮಲತಾ ವಿಷ್ಣುವರ್ಧನ್ ತೀರಿಕೊಂಡಾಗ ಅಂಬರೀಶ್ ಆಡಿದ ಮಾತುಗಳ ವಿಡಿಯೋ ತುಣುಕನ್ನು ಪ್ರಕಟಿಸಿ ವಿಷ್ಣು-ಅಂಬಿ ಸ್ನೇಹ ಎಂತಹದ್ದು ಎಂದು ತಿಳಿಯಬೇಕಾದರೆ ಈ ವಿಡಿಯೋ ನೋಡಿ. ನಿಜವಾದ ಸ್ನೇಹಕ್ಕೆ ಹುಟ್ಟು, ಸಾವು ಇಲ್ಲ. ಕೆಲವರು ಅನಗತ್ಯ ಕಾಮೆಂಟ್ ಗಳಿಂದ ಇವರಿಬ್ಬರ ಸ್ನೇಹವನ್ನು ಅಳೆಯುತ್ತಿರುವುದು ನೋಡಿದರೆ ದುಃಖವಾಗುತ್ತದೆ. ದಯವಿಟ್ಟು ಯಾರೂ ವಿಷ್ಣು-ಅಂಬಿ ಸ್ನೇಹಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಬೇಡಿ ಎಂದು ಸುಮಲತಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments