Webdunia - Bharat's app for daily news and videos

Install App

ಮೊಮ್ಮಗನಿಗೆ ಮುದ್ದಾದ ಹೆಸರಿಟ್ಟ ಸುಮಲತಾ, ಅಂಬಿ ಆಸೆಯಂತೆ ನೆರವೇರಿದ ತೊಟ್ಟಿಲು ಶಾಸ್ತ್ರ

Sampriya
ಭಾನುವಾರ, 16 ಮಾರ್ಚ್ 2025 (13:21 IST)
Photo Courtesy X
ಬೆಂಗಳೂರು: ಸುಮಲತಾ ಹಾಗೂ ಅಂಬರೀಶ್ ಅವರ ಮೊಮ್ಮಗನಿಗೆ ರಾಣಾ ಅಮರ್ ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರಿನ ಹೊಟೇಲ್‌ನಲ್ಲಿ ನಡೆದ ಸಮಾರಂಭದಲ್ಲಿ ಅಭಿಷೇಕ್ ಹಾಗೂ ಅವಿವಾ ದಂಪತಿಯ ಪುತ್ರನಿಗೆ ನಾಮಕರಣವನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು.

ವಿಶೇಷ ಏನೆಂದರೆ ಯಶ್ ಪುತ್ರಿಗೆ ಅಂಬರೀಶ್‌ ನೀಡಿದ್ದ ವಿಶೇಷ ತೊಟ್ಟಿಲಿನಲ್ಲೇ ಶಾಸ್ತ್ರವನ್ನು ಮಾಡುವ ಮೂಲಕ ಅಂಬರೀಶ್ ಆಸೆಯಂತೆ ತೊಟ್ಟಿಲು ಶಾಸ್ತ್ರ ನೆರವೇರಿಸಲಾಗಿದೆ.  ಅದಲ್ಲದೆ ಮಗುವಿಗೆ ಅಂಬರೀಶ್ ಅವರು ಹುಟ್ಟು ಹೆಸರಾದ ಅಮರ್‌ ಎಂದು ಇಡಲಾಗಿದೆ.

ಇನ್ನೂ ಈ ಸಮಾರಂಭದಲ್ಲಿ ಅಂಬರೀಶ್ ಕುಟುಂಬ ಹಾಗೂ ಆಪ್ತ ಸ್ನೇಹಿತರ ಬಳಗದವರು ಪಾಲ್ಗೊಂಡರು. ಈಚೆಗೆ ದರ್ಶನ್ ಹಾಗೂ ಸುಮಲತಾ ನಡುವೆ ಮುನಿಸು ವಿಚಾರ ಸದ್ದು ಮಾಡಿತ್ತು. ಆದರೆ ನಮ್ಮ ಸಂಬಂಧದಲ್ಲಿ ಯಾವುದೇ ಬಿರುಕಿಲ್ಲ. ಸುಮ್ಮನೇ ಊಹಾಪೋಹ ಹಬ್ಬಿಸಬೇಡಿ ಎಂದು ಸುಮಲತಾ ಸ್ವತಃ ಸ್ಪಷ್ಟನೆ ನೀಡಿದ್ದರು.

ದರ್ಶನ್ ಇಲ್ಲದೆ ನಮ್ಮ ಮನೆ ಕಾರ್ಯಕ್ರಮ ನಡೆಯಲ್ಲ ಎಂದು ಸುಮಲತಾ ಹೇಳಿದ್ದರು. ಆದರೆ ಇದೀಗ ದರ್ಶನ್  ನಾಮಕರಣ ಕಾರ್ಯಕ್ರಮದಲ್ಲಿ ದೂರ ಉಳಿದಿರುವುದು ಮತ್ತಷ್ಟು ಊಜಪೋಹಗಳನ್ನು ಹೆಚ್ಚಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments