Webdunia - Bharat's app for daily news and videos

Install App

ಹಿಮಾಲಯದಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಿದ ಸೂಪರ್ ಸ್ಟಾರ್ ಅಂಡ್ ಫ್ರೆಂಡ್ಸ್

Webdunia
ಗುರುವಾರ, 26 ಅಕ್ಟೋಬರ್ 2017 (15:03 IST)
ನವದೆಹಲಿ: ದಕ್ಷಿಣ ಭಾರತದ ಸೂಪರ್‌ ಸ್ಟಾರ್‌ ರಜನಿಕಾಂತ್‌ ಹಾಗೂ ಅವರ ಸ್ನೇಹಿತರು ಹಿಮಾಲಯದಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯ ಯೋಗದ ಸತ್ಸಂಗ ಸೊಸೈಟಿಯ ಶತಮಾನೋತ್ಸವ ಅಂಗವಾಗಿ ರಜನಿ ಹಾಗೂ ಅವರ ಗೆಳೆಯರು ಹಿಮಾಲಯದಲ್ಲಿ ಧ್ಯಾನ ಕೇಂದ್ರ ನಿರ್ಮಿಸಿದ್ದಾರೆ. ಉತ್ತರಾಖಂಡ್‌ನ ದ್ರೋಣಗಿರಿ ಪರ್ವತದಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲಾಗಿದೆ. ನವೆಂಬರ್‌ 10ರಂದು ಧ್ಯಾನ ಕೇಂದ್ರ ಲೋಕಾರ್ಪಣೆಯಾಗಲಿದೆ.

ಆಧ್ಯಾತ್ಮದಲ್ಲಿ ನಂಬಿಕೆ ಹೊಂದಿರುವ ಸೂಪರ್‌ ಸ್ಟಾರ್‌ ರಜನಿ ಹಾಗೂ ಅವರ ಸ್ನೇಹಿತರ ಬಳಗ, ಹಿಮಾಲಯದಲ್ಲಿ ಶ್ರೀಗುರು ಮಹಾವತಾರ ಬಾಬಾ ನೆಲೆಸಿದ್ದಾರೆ ಎಂದು ಹಿಮಾಲಯದ ಗುಹೆಗೆ ದಶಕದಿಂದಲೂ ಭೇಟಿ ನೀಡುತ್ತಿದ್ದಾರೆ. ರಜನಿಕಾಂತ್‌ ಹಾಗೂ ಗೆಳೆಯರಾದ ಬೆಂಗಳೂರಿನ ಉದ್ಯಮಿ ಹರಿ, ದೆಹಲಿಯ ವಿ.ಡಿ.ಮೂರ್ತಿ, ಶ್ರೀಧರ್‌ ಹಾಗೂ ಚೆನ್ನೈನ ವಿಶ್ವನಾಥನ್‌ ಸೇರಿಕೊಂಡು ಈ ಧ್ಯಾನ ಕೇಂದ್ರ ಸ್ಥಾಪಿಸಿದ್ದಾರೆ.

ಭಾರತೀಯ ಯೋಗದ ಸತ್ಸಂಗ ಸೊಸೈಟಿಯ ಶತಮಾನೋತ್ಸವ ಹಿನ್ನೆಲೆಯಲ್ಲಿ ಧ್ಯಾನ ಕೇಂದ್ರ ನಿರ್ಮಿಸಿದ್ದೇವೆ. ಹಿಮಾಲಯಕ್ಕೆ ಭೇಟಿ ಕೊಡುವ ಬಾಬಾಜಿ ಅವರ ಭಕ್ತರಿಗೆ ಎಲ್ಲಾ ರೀತಿಯ ಸೌಕರ್ಯ ಒದಗಿಸೋದು ಧ್ಯಾನ ಕೇಂದ್ರದ ಪ್ರಮುಖ ಉದ್ದೇಶ ಎಂದು ವಿಶ್ವನಾಥನ್‌ ತಿಳಿಸಿದ್ದಾರೆ. 

ಸದ್ಯ '2.O' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಜನಿಕಾಂತ್‌, ನ. 10ರಂದು ನಡೆಯುವ ಧ್ಯಾನ ಕೇಂದ್ರದ ಗೃಹಪ್ರವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜೊತೆಗೆ 2018ರ ಮಾರ್ಚ್‌ನಲ್ಲೂ ಸಹ ರಜನಿ ಹಿಮಾಲಯಕ್ಕೆ ಭೇಟಿ ನೀಡುವ ಸಾಧ್ಯತೆ ಎಂದು ವಿ. ವಿಶ್ವನಾಥನ್‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments