Webdunia - Bharat's app for daily news and videos

Install App

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

Krishnaveni K
ಮಂಗಳವಾರ, 17 ಜೂನ್ 2025 (13:58 IST)
ನವದೆಹಲಿ: ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶಿಸಿದ್ದು ಇಷ್ಟವಿಲ್ಲದಿದ್ದರೆ ನೋಡಬೇಡಿ ಎಂದಿದೆ.

ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಕಮಲ್ ಹಾಸನ್ ವಿವಾದ ಸೃಷ್ಟಿಸಿದ್ದರು. ಈ ಕಾರಣಕ್ಕೆ ಅವರ ಸಿನಿಮಾಗೆ ಫಿಲಂ ಚೇಂಬರ್ ಕರ್ನಾಟಕದಲ್ಲಿ ನಿಷೇಧ ಹೇರಿತ್ತು. ಇದನ್ನು ರಾಜ್ಯ ಸರ್ಕಾರವೇ ಬೆಂಬಲಿಸಿತ್ತು. ಹೀಗಾಗಿ ಕಮಲ್ ಹಾಸನ್ ಮೊದಲು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಅವರಿಗೆ ಛೀಮಾರಿ ಹಾಕಿತ್ತು.

ಮೊದಲು ಕನ್ನಡಿಗರ ಕ್ಷಮೆ ಕೇಳಿ. ಬಳಿಕ ರಿಲೀಸ್ ಬಗ್ಗೆ ಮಾತನಾಡೋಣ ಎಂದಿತ್ತು. ಹೀಗಾಗಿ ಥಗ್ ಲೈಫ್ ಚಿತ್ರತಂಡ ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿದೆ.

ಈ ಬಗ್ಗೆ ವಿಚಾರಣೆ ನಡೆಸಿ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಇಷ್ಟವಿಲ್ಲದವರು ಸಿನಿಮಾ ನೋಡಬೇಡಿ. ಕಮಲ್ ಹಾಸನ್ ಚಿತ್ರ ನೋಡುವುದು ಬಿಡುವುದು ಕನ್ನಡಿಗರಿಗೆ ಬಿಟ್ಟ ವಿಚಾರ. ಬೆಂಗಳೂರಿನ ಜನಕ್ಕೆ ಕಮಲ್ ಹಾಸನ್ ಹೇಳಿಕೆ ತಪ್ಪು ಎನಿಸಿದಲ್ಲಿ ಅವರಿಗೆ ಯಾವುದು ಸರಿ ಅದನ್ನು ಮಾಡಲಿ. ಆದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇವೆ ಎನ್ನುವುದು ಬೆದರಿಸುವುದು ಏಕೆ? ಒಬ್ಬ ವ್ಯಕ್ತಿ ತಪ್ಪು ಹೇಳಿಕೆ ನೀಡಿದ್ದರೆ ಕ್ಷಮಿಸುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಇಲ್ಲಿ ಒಬ್ಬ ವ್ಯಕ್ತಿಯ ವಿರುದ್ಧ ಎಲ್ಲರೂ ಒಗ್ಗಟ್ಟಾದಂತೆ ಕಾಣುತ್ತಿದೆ. ಕ್ಷಮೆ ಕೇಳು ಎಂದು ಹೇಳುವುದು ಹೈಕೋರ್ಟ್ ಕೆಲಸ ಅಲ್ಲ ಎಂದಿದೆ.

ಇದೀಗ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ನೀಡಲು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಥಗ್ ಲೈಫ್ ಸಿನಿಮಾ ಈಗಾಗಲೇ ಬೇರೆ ರಾಜ್ಯಗಳಲ್ಲಿ ಬಿಡುಗಡೆಯಾಗಿದೆ. ಆದರೆ ಗಳಿಕೆ ವಿಚಾರದಲ್ಲಿ ಹಿಂದೆ ಬಿದ್ದಿದೆ ಎಂಬ ಸುದ್ದಿಯಿದೆ. ಈ ಸಿನಿಮಾ ಕನ್ನಡದಲ್ಲಿಲ್ಲ. ಹಾಗಿದ್ದರೂ ಈಗ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸುಪ್ರೀಂ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ಮುಂದಿನ ಸುದ್ದಿ
Show comments