Webdunia - Bharat's app for daily news and videos

Install App

ಗುರು ಶಿಷ್ಯರ ನಡುವೆ ಮತ್ತೆ ವಿರೋಧ ಹುಟ್ಟು ಹಾಕಿತಾ ಟಗರು ಚಿತ್ರದ ಸಂಭಾಷಣೆ!

Webdunia
ಮಂಗಳವಾರ, 13 ಮಾರ್ಚ್ 2018 (07:09 IST)
ಬೆಂಗಳೂರು : ಹಿಂದೊಮ್ಮೆ ಗುರು ಶಿಷ್ಯರಂತಿದ್ದ ನಿರ್ದೇಶಕ ಗುರುಪ್ರಸಾದ್ ಹಾಗೂ ಧನಂಜಯ್ ಅವರ ನಡುವೆ ವಿರೋಧ ವ್ಯಕ್ತವಾಗಿದ್ದು ಎಲ್ಲರಿಗೂ ತಿಳಿದೇ ಇದೆ. ಈಗ ‘ಟಗರು’ ಚಿತ್ರದಲ್ಲಿ ಡಾಲಿ ಪಾತ್ರ ಮಾಡಿದ  ಧನಂಜಯ್ ಅವರು ಚಿತ್ರದ ಒಂದು ಸಂಭಾಷಣೆ ಮೂಲಕ ನಿರ್ದೇಶಕ ಗುರುಪ್ರಸಾದ್ ಅವರಿಗೆ ಟಾಂಗ್ ನೀಡಿದ್ದಾರೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ.


‘ಟಗರು’ ಚಿತ್ರದ ಒಂದು ಸನ್ನಿವೇಶದಲ್ಲಿ, ಡಾಲಿ ಪಾತ್ರಧಾರಿ ಧನಂಜಯ್ ಅವರು ‘ಇಷ್ಟುದ್ದ ಗಡ್ಡ ಬಿಟ್ಟುಬಿಟ್ರೆ ಬುದ್ಧಿವಂತರಾಗೊಲ್ಲ. ಗಡ್ಡ ಬಿಟ್ಟೋರೆಲ್ಲಾ ಬುದ್ಧಿವಂತರಾದರೆ, ಕರಡಿ ಜಗತ್ತಿನ ಅತೀ ದೊಡ್ಡ ಬುದ್ಧಿವಂತ ಪ್ರಾಣಿ’ ಎಂದು ಸಂಭಾಷಣೆ ಹೇಳುತ್ತಾರೆ. ನಿರ್ದೇಶಕ ಗುರುಪ್ರಸಾದ್‍ ಅವರು ಯಾವಾಗಲೂ ಗಡ್ಡ ಬಿಟ್ಟುಕೊಂಡೆ ಇರುವುದರಿಂದ ಈ ಸಂಭಾಷಣೆಯನ್ನು ಅವರ ಕುರಿತಾಗಿಯೇ ಹೇಳಲಾಗಿದೆ ಎಂದು ಪ್ರೇಕ್ಷಕರು ಹೇಳಿದ್ದಾರೆ.


ಚಿತ್ರವೊಂದರ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿದ ನಿರ್ದೇಶಕ ಗುರುಪ್ರಸಾದ್ ಅವರಲ್ಲಿ ಈ ಬಗ್ಗೆ ಕೇಳಿದಾಗ,’ ನನಗೆ ಆ ಬಗ್ಗೆ ಯಾವುದೇ ಬೇಸರವಿಲ್ಲ. ನಾನು ಸಿನಿಮಾ ನೋಡಿಲ್ಲ. ಸಿನಿಮಾದ ಡೈಲಾಗ್‍ನಲ್ಲಿ ನನಗೆ ಟಾಂಗ್ ಕೊಟ್ಟಿದ್ದಾನೆ ಎಂದು ಯಾರೋ ಹೇಳಿದ್ದನ್ನು ಕೇಳಿದೆ.  ಏಕೆಂದರೆ, ಮಾತನಾಡಿರೋದು ವಿಲನ್ ಪಾತ್ರ ಮತ್ತು ಸಾಯುವಂತಹ ಪಾತ್ರ. ಹಾಗಾಗಿ, ನನಗೆ ಆ ಬಗ್ಗೆ ನೋವಿಲ್ಲ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments