Select Your Language

Notifications

webdunia
webdunia
webdunia
webdunia

ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿ ನಾನು: ತರುಣ್ ಸುಧೀರ್

ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿ ನಾನು: ತರುಣ್ ಸುಧೀರ್
ಬೆಂಗಳೂರು , ಗುರುವಾರ, 11 ಮಾರ್ಚ್ 2021 (10:25 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇಂದಿನಿಂದ ತೆರೆಗೆ ಬಂದಿದ್ದು, ನಿರ್ದೇಶಕ ತರುಣ್ ಸುಧೀರ್ ಅಭಿಮಾನಿಗಳಿಗೆ ಪತ್ರ ಬರೆದು ಚಿತ್ರ ಗೆಲ್ಲಿಸಿಕೊಡಲು ಮನವಿ ಮಾಡಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಸಂದೇಶ ಬರೆದಿರುವ ತರುಣ್ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಯಂತೆ ನಿಮ್ಮ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ತರುಣ್ ಹೇಳಿಕೊಂಡಿದ್ದಾರೆ.

‘ಓಣಿಯ ಮಗು ಎಲ್ಲಾ ಕಡೆ ಆಡಿ ಕೊನೆಗೆ ತಾಯಿಯ ಮಡಿಲು ಸೇರಿದಂತೆ ರಾಬರ್ಟ್ ನಿಮ್ಮ ಮುಂದೆ ಬಂದಿದೆ. ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿರುವ ರಾಬರ್ಟ್ ಚಿತ್ರವನ್ನು ನೋಡಿ ಹಾರೈಸಿ ಬೆಳೆಸಿ. ಅಲ್ಲಿಯವರೆಗೂ ನಾನು ಪರೀಕ್ಷೆ ಬರೆದ ವಿದ್ಯಾರ್ಥಿಯಂತೆ, ಚುನಾವಣೆ ಎದುರಿಸಿದ ಅಭ್ಯರ್ಥಿಯಂತೆ ಫಲಿತಾಂಶಕ್ಕಾಗಿ ಕಾಯುತ್ತಿರುವ ತರುಣನಂತೆ ನಿಮ್ಮ ಅಭಿಪ್ರಾಯ ಅನಿಸಿಕೆಗೆ ಕಾಯುತ್ತಿರುತ್ತೇನೆ’ ಎಂದು ತರುಣ್ ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತೆಲುಗು, ಕನ್ನಡದಲ್ಲಿ ಮಾತ್ರ ಯುವರತ್ನ ಬಿಡುಗಡೆಗೆ ಸ್ಪಷ್ಟನೆ ಕೊಟ್ಟ ನಿರ್ದೇಶಕರು