Select Your Language

Notifications

webdunia
webdunia
webdunia
Thursday, 10 April 2025
webdunia

ತೆಲುಗು ನಟಿ ಶ್ರಾವಣಿ ಆತ್ಮಹತ್ಯೆ ಪ್ರಕರಣದ ಆರೋಪಿ ಪೊಲೀಸರಿಗೆ ಶರಣು

ಹೈದರಾಬಾದ್
ಹೈದರಾಬಾದ್ , ಗುರುವಾರ, 17 ಸೆಪ್ಟಂಬರ್ 2020 (16:07 IST)
ಹೈದರಾಬಾದ್ : ತೆಲುಗು ನಟಿ ಶ್ರಾವಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ನಿರ್ಮಾಪಕ ಅಶೋಕ್ ರೆಡ್ಡಿ ಪೊಲೀಸರಿಗೆ ಶರಣಾಗಿದ್ದಾನೆ.

ನಟಿ ಶ್ರಾವಣಿ ಇತ್ತೀಚೆಗಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಅವರ ಸಾವಿಗೆ ಮೂವರು ಕಾರಣ ಎಂಬುದಾಗಿ ತಿಳಿದುಬಂದಿತ್ತು. ಇಬ್ಬರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಮೂರನೇ ಆರೋಪಿಯಾಗಿದ್ದ ನಿರ್ಮಾಪಕ  ಅಶೋಕ್ ರೆಡ್ಡಿ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದರು.

ಆದರೆ ನಿರ್ಮಾಪಕ  ಅಶೋಕ್ ರೆಡ್ಡಿ ತಾನೇ ಖುದ್ದಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಮೂವರು ನಟಿ ಶ್ರಾವಣಿಗೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಮಲ್ ಹಾಸನ್ 232ನೇ ಸಿನಿಮಾ ಅನೌನ್ಸ್