ಸಿಎಎ ಜಾರಿಯಾಗದಂತೆ ನೋಡಿಕೊಳ್ಳಬೇಕು: ದಳಪತಿ ವಿಜಯ್ ಆಕ್ರೋಶ

Krishnaveni K
ಮಂಗಳವಾರ, 12 ಮಾರ್ಚ್ 2024 (10:12 IST)
ಚೆನ್ನೈ: ಕೇಂದ್ರ ಸರ್ಕಾರ ಸಿಎಎ ಜಾರಿ ಮಾಡಿದ ಬೆನ್ನಲ್ಲೇ ಹಲವರಿಂದ ವಿರೋಧ ವ್ಯಕ್ತವಾಗಿದೆ. ಪೌರತ್ವ ತಿದ್ದುಪಡಿ ಖಾಯಿದೆ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ದಳಪತಿ ವಿಜಯ್ ಆಕ್ರೋಶ ಹೊರಹಾಕಿದ್ದಾರೆ.

ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕರೂ ಆಗಿರುವ ದಳಪತಿ ವಿಜಯ್ ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಖಾಯಿದೆ ಜಾರಿ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈಗ ಕೇಂದ್ರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಸ್ವೀಕಾರಾರ್ಹವಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

‘ದೇಶದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಜೀವನ ಮಾಡುತ್ತಿರುವಾಗ ಇಂತಹ ಕಾಯಿದೆಗಳ ಅವಶ್ಯಕತೆ ಏನಿದೆ? 2019 ರ ಪೌರತ್ವ ತಿದ್ದುಪಡಿ ಖಾಯಿದೆಯಂತಹ ಯಾವುದೇ ಖಾಯಿದೆಗಳನ್ನು ಒಪ್ಪಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಈ ಕಾಯಿದೆ ಜಾರಿಗೆ ಬರಬಾರದು’ ಎಂದು ವಿಜಯ್ ಒತ್ತಾಯಿಸಿದ್ದಾರೆ.

ಇನ್ನು, ಕೇಂದ್ರ ಸರ್ಕಾರ ಸಿಎಎ ಜಾರಿಗೆ ತರುತ್ತಿದ್ದಂತೇ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದು ಚುನಾವಣೆಯಲ್ಲಿ ಲಾಭ ಪಡೆಯಲು ಮೋದಿ ಸರ್ಕಾರದ ಹುನ್ನಾರ ಎಂದು ಎಐಎಂಐಎಂ ಪಕ್ಷದ ನಾಯಕ ಅಸಾವುದ್ದೀನ್ ಒವೈಸಿ ಹೇಳಿದ್ದಾರೆ.  ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ರಾಜ್ಯದಲ್ಲಿ ಇದನ್ನು ಜಾರಿಗೆ ತರಲು ಬಿಡಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಖಾಯಿದೆಯಲ್ಲಿ ಮುಸ್ಲಿಮರನ್ನು ಸೇರಿಸಲಾಗಿಲ್ಲ ಎನ್ನುವುದೇ ವಿಪಕ್ಷಗಳ ತಕರಾರಿಗೆ ಕಾರಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments