Webdunia - Bharat's app for daily news and videos

Install App

ನಟನೆ ಬಣ್ಣ ಮಾಸುವ ತನಕ ಅಷ್ಟೇ, ನಿವೇದಿತಾಗೆ ಬುದ್ಧಿ ಹೇಳಿದ ನೆಟ್ಟಿಗರು

sampriya
ಶನಿವಾರ, 8 ಜೂನ್ 2024 (09:24 IST)
Photo By X
ಬೆಂಗಳೂರು:  ನಟ, ಗಾಯಕ ಚಂದನ್‌ ಶೆಟ್ಟಿ ಜತೆಗಿನ ದಾಂಪತ್ಯದಿಂದ ವಿಚ್ಚೇಧನ ಪಡೆಯುತ್ತಿರುವ ಸುದ್ದಿ ವೈರಲ್‌ ಬೆನಲ್ಲೇ ಬಿಗ್‌ಬಾಸ್‌ ಸ್ಪರ್ಧಿ ನಿವೇದಿತಾ ಗೌಡ ಅವರು ಇನ್‌ಸ್ಟಾಗ್ರಾಂನಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಈ ದಿನ ಚಂದನ್‌ ಶೆಟ್ಟಿ ಮತ್ತು ನಾನು ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು  ಗೌರವಿಸಲು ಕೋರುತ್ತೇವೆ. ನಮ್ಮ ಸ್ನೇಹಿತರು ಮತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ.  ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಅವರು ಬರೆದುಕೊಂಡಿದ್ದರೆ.

ಈ ಪೋಸ್ಟ್‌ಗೆ ನೆಟ್ಟಿಗರು ವಿಧ ವಿಧವಾಗಿ ಕಮೆಂಟ್‌ ಮಾಡಿದ್ದಾರೆ. ಒಬ್ಬರು ಪ್ರತಿಕ್ರಿಯಿಸಿ ನಟನೆಗಾಗಿ ದಾಂಪತ್ಯ ಹಾಳು ಮಾಡಿಕೊಳ್ಳಬೇಡಿ, ನಟನೆ ಬಣ್ಣ ಮಾಸುವ ತನಕ, ಪತಿ ಪತ್ನಿ ಸಂಬಂಧ ಜೀವನ ಇರುವ ತನಕ ಎಂದು ಬುದ್ಧಿ ಹೇಳಿದ್ದಾರೆ.

ಮತ್ತೊಬ್ಬರು ದುಡ್ಡಿನ ಪ್ರೀತಿ ದುಡ್ಡು ಇರೋ ತನಕ, ಬಡವನ ಪ್ರೀತಿ ಸಾಯೋ ತನಕ, ಒಳ್ಳೇದ್ ಆಗ್ಲಿ ಎಂದು ಬರೆದುಕೊಂಡಿದ್ದಾರೆ. ಈ ಬಾಳಿಗೆ ರಾಜ ರಾಣಿ ಬೇರೆ ಹೋಗಿದ್ದು ಯಾವ ಕರ್ಮಕ್ಕೆ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇನ್ನೂ ನಿವೇದಿತಾ ಅವರಿಂದ ವಿಚ್ಛೇದನ ಪಡೆದು ದೂರವಾಗುತ್ತಿರುವ ಬಗ್ಗೆ ನಟ ಚಂದನ್‌ ಶೆಟ್ಟಿ ಕೂಡ ಪೋಸ್ಟ್‌ ಹಂಚಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments