Select Your Language

Notifications

webdunia
webdunia
webdunia
webdunia

ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ -ಪ್ರಶಾಂತ್ ಸಂಬರ್ಗಿ

ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ -ಪ್ರಶಾಂತ್ ಸಂಬರ್ಗಿ
ಬೆಂಗಳೂರು , ಸೋಮವಾರ, 22 ಅಕ್ಟೋಬರ್ 2018 (14:05 IST)
ಬೆಂಗಳೂರು : ಬಹುಭಾಷ ನಟ ಅರ್ಜುನ್ ಸರ್ಜಾ ಮೇಲೆ ನಟಿ ಶ್ರತಿ ಹರಿಹರನ್ ಮಾಡಿರುವ ಮೀಟೂ ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ ಎಂದು ಅರ್ಜುನ್ ಸರ್ಜಾ ಪರ ಕನ್ನಡ ಹೋರಾಟಗಾರ ಪ್ರಶಾಂತ್ ಸಂಬರ್ಗಿ ಹೇಳುವುದರ ಮೂಲಕ ಈ ಪ್ರಕರಣಕ್ಕೆ ಧರ್ಮದ ನಂಟು ಅಂಟಿಸಲಾಗಿದೆ.


ಅರ್ಜುನಾ ಸರ್ಜಾ ಅವರು ಹನುಮ ಭಕ್ತ, ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ. ಸರ್ಜಾ ಅವರು ಹಿಂದೂಧರ್ಮ ಅನುಸರಿಸುತ್ತಾರೆ. ಅವರು ಚೆನ್ನೈನಲ್ಲಿ ಹನುಮನ ಮೂರ್ತಿ ನಿರ್ಮಿಸಿದ್ದಾರೆ. ಅರ್ಜುನ್ ಸರ್ಜಾ ಅವರ ತಂದೆ ಆರ್‍ಎಸ್‍ಎಸ್‍ನಲ್ಲಿದ್ದವರು ಎಂದು ಅರ್ಜುನ್ ಸರ್ಜಾ ಪರ ಕನ್ನಡ ಹೋರಾಟಗಾರ, ಉದ್ಯಮಿ ಪ್ರಶಾಂತ್ ಸಂಬರ್ಗಿ ಹೇಳಿದ್ದಾರೆ.


ಶೃತಿ ಹರಿಹರನ್ ತಂದೆ ಕಮ್ಯೂನಿಸ್ಟ್ ಬೆಂಬಲಿಗರು. ಶೃತಿ ಹರಿಹರನ್ ಅವರ ಮೀಟೂ ಆರೋಪದ ಹಿಂದೆ ಮೋದಿ ವಿರೋಧಿ, ಹಿಂದೂ ವಿರೋಧಿ, ಬಿಜೆಪಿ ವಿರೋಧಿ ಅಜೆಂಡಾವಿದೆ. ಕವಿತಾ ಲಂಕೇಶ್, ನಟ ಚೇತನ್, ರೂಪಾ ಅಯ್ಯರ್ ಇವರೆಲ್ಲ ಕನ್ನಡ ಸಿನಿಮಾ ಲೋಕದ ಎಡಪಂಥಿಯರು. ಪ್ರಕಾಶ್ ರೈ ಅಂತ ವುಮೆನೈಜರ್ ಹಿಂದೆ ಮುಂದೆ ನೋಡದೆ ಸಪೋರ್ಟ್ ಮಾಡ್ತಿದ್ದಾರೆ. ಇದು ಸಂಪೂರ್ಣ ವ್ಯವಸ್ಥಿತವಾದ ಪೊಲಿಟಿಕಲ್ ಡ್ರಾಮಾ ಎಂದು ಪ್ರಶಾಂತ್ ಸಂಬರ್ಗಿ ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಮದುವೆ ಡೇಟ್ ರಿವಿಲ್ ಮಾಡಿದ ನಟಿ ದೀಪಿಕಾ ಪಡುಕೋಣೆ