Select Your Language

Notifications

webdunia
webdunia
webdunia
webdunia

ಅಭಿಮಾನಿಗಳ ಆಸೆಗೆ ಮತ್ತೆ ತಣ್ಣೀರೆರಚಿದ ಕೇಂದ್ರ ಸರ್ಕಾರ

ಅಭಿಮಾನಿಗಳ ಆಸೆಗೆ ಮತ್ತೆ ತಣ್ಣೀರೆರಚಿದ ಕೇಂದ್ರ ಸರ್ಕಾರ
ಚೆನ್ನೈ , ಶುಕ್ರವಾರ, 8 ಜನವರಿ 2021 (12:08 IST)
ಚೆನ್ನೈ : ಕೊರೊನಾ ಕಾರಣಗಳಿಂದ ಮುಚ್ಚಲಾಗಿದ್ದ ಚಿತ್ರಮಂದಿರಗಳನ್ನು ಇತ್ತೀಚೆಗಷ್ಟೇ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಹಾಗಾಗಿ ಸ್ಟಾರ್ ನಟರ ಚಿತ್ರಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ.

ನಟ ವಿಜಯ್ ಅಭಿನಯದ ಮಾಸ್ಟರ್, ನಟ ಸಿಂಬು ಅಭಿನಯದ ಈಶ್ವರನ್  ಮುಂತಾದ ಸ್ಟಾರ್ ನಟರ ಚಿತ್ರಗಳನ್ನು ಸಂಕ್ರಾಂತಿಯ ವಿಶೇಷವಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸಲಾಗುತ್ತಿದೆ. ಆದರೆ ಇದೀಗ ಸರ್ಕಾರ ಮತ್ತೆ ಅಭಿಮಾನಿಗಳ ಆಸೆಗೆ ತಣ್ಣೀರೆರಚಿದ್ದಾರೆ.

ಅದೇನೆಂದರೆ ಇತ್ತೀಚೆಗೆ ತಮಿಳುನಾಡು ಸರ್ಕಾರ ಚಿತ್ರಮಂದಿರಗಳಲ್ಲಿ 100% ಸೀಟುಗಳಿಗೆ ಅವಕಾಶ ನೀಡಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ  100% ಸೀಟುಗಳಿಗೆ ಅನುಮತಿ ನೀಡಬಾರದೆಂದು ಆದೇಶ ಹೊರಡಿಸಿದೆ ಎನ್ನಲಾಗಿದೆ. ಇದು ಅಭಿಮಾನಿಗಳಲ್ಲಿ ಬೇಸರವನ್ನುಂಟು ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಬ್ಬರನೊಬ್ಬರು ತಬ್ಬಿಕೊಂಡು ಮುದ್ದಾಡಿದ ನಟಿಯರು