Select Your Language

Notifications

webdunia
webdunia
webdunia
webdunia

ರೇಣುಕಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿ ಮುಗಿಸಿದ 'ಡಿ ಗ್ಯಾಂಗ್‌'

Renukaswamy Murder Case

sampriya

ಬೆಂಗಳೂರು , ಶನಿವಾರ, 15 ಜೂನ್ 2024 (20:32 IST)
Photo By X
ಬೆಂಗಳೂರು: ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್‌ ಕಳುಹಿಸಿದ ರೇಣುಕಸ್ವಾಮಿಗೆ ಬಂಧಿತ ಆರೋಪಿಗಳು ಎಲೆಕ್ಟ್ರಿಕ್‌ ಶಾಕ್‌ ನೀಡಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಐದು ದಿನಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿದ್ದರಿಂದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 16 ಮಂದಿ ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಈ ವೇಳೆ ರೇಣುಕಸ್ವಾಮಿ ಕೊಲೆಗೆ ಎಲೆಕ್ಟ್ರಿಕ್ ಶಾಕ್ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಗಳು ಬಾಯಿ ಬಿಟ್ಟಿದ್ದಾರೆ.

ಹೀಗಾಗಿ ಆರ್ಥಿಕ ಅಪರಾಧಗಳ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿ ನಂ 1 ರಿಂದ ಹಾಗೂ ಆರೋಪಿ ನಂ 7, ಆರೋಪಿ ನಂ 10 ರಿಂದ 14 ಹಾಗೂ ಆರೋಪಿ ನಂ 16ರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ದರ್ಶನ್ ಅಂಡ್ ಗ್ಯಾಂಗ್‌ಗೆ ಮತ್ತೆ ಸಂಕಷ್ಟು ಎದುರಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆ ಒಂದು ಗಳಿಗೆಯಲ್ಲಿ ಗಾಢವಾಗಿತ್ತು ದರ್ಶನ್, ಪವಿತ್ರಾ ಗೌಡ ಸಂಬಂಧ