Webdunia - Bharat's app for daily news and videos

Install App

ನನ್ನ ಕಲಾದೇವರು ಹುಟ್ಟಿದ ದಿನ: 'ವರನಟ'ನ ಜತೆಗಿನ ಒಡನಾಟ ಹಂಚಿಕೊಂಡ ಜಗ್ಗೇಶ್

Sampriya
ಬುಧವಾರ, 24 ಏಪ್ರಿಲ್ 2024 (16:29 IST)
photo Courtesy Instagram
ಬೆಂಗಳೂರು:  ಇಂದು ವರನಟ ಡಾ.ರಾಜಕುಮಾರ್ ಅವರು 96ನೇ ಹುಟ್ಟು ಹಬ್ಬದ ಹಿನ್ನೆಲೆ ನವರಸ ನಾಯಕ ಜಗ್ಗೇಶ್ ಅವರು ಕಂಠೀರವ ಸ್ಟುಡಿಯೋದಲ್ಲಿರುವ ರಾಜ್‌ ಸಮಾಧಿಗೆ ನಮನ ಸಲ್ಲಿಸಿದರು.

ಈ ವೇಳೆ ರಾಜ್ ಅವರ ಜತೆಗಿನ ಸುಂದರ ಕ್ಷಣಗಳನ್ನು ಸ್ಮರಿಸಿಕೊಂಡರು. ತಾನು ಆತ್ಮಹತ್ಯೆಗೆ ಪ್ರಯತ್ನಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ಬಂದು ಅಣ್ಣಾವ್ರು ಧೈರ್ಯ ತುಂಬಿದ್ದರು ಎಂದು ಹಳೆಯ ದಿನಗಳನ್ನು ಜಗ್ಗೇಶ್ ಸ್ಮರಿಸಿದ್ದಾರೆ. ಡಾ.ರಾಜ್‌ಕುಮಾರ್ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ.

1994ರ ಸಮಯದಲ್ಲಿ ನನ್ನ ಸಿನಿಮಾಗಳು ಸತತ ಸೋಲು ಕಂಡವು. ಇದರಿಂದ ನಾನು ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಯತ್ನಿಸಿದ ವೇಳೆ ಆಸ್ಪತ್ರೆಗೆ ನನ್ನನ್ನು ದಾಖಲಿಸಿದ್ದರು. ಅಂದು ಅಣ್ಣಾವ್ರು ಬಂದು ತಲೆ ಮೇಲೆ ಕೈ ಇಟ್ಟು ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದರು.

ಅತಿಯಾದ ಆಸೆ ಬೇಡ, ಜಗತ್ತನ್ನು ಮೆಚ್ಚಿಸಿ ಬದುಕೋಕೆ ಹೋಗಬಾರದು ಎಂದು ಕಿವಿಹಿಂಡಿದ್ದರು. ನನಗೆ ಮಾನಸಿಕವಾಗಿ ನನ್ನ ಜೊತೆ ನಿಂತು ಧೈರ್ಯ ತುಂಬಿದರು.

ಇನ್ನೂ ಸಾಮಾಜಿಕ ಜಾಲತಾಣದಲ್ಲಿ ರಾಜಕುಮಾರ್ ಹುಟ್ಟುಹಬ್ಬಕ್ಕೆ ಶುಭಕೋರಿ ತಮ್ಮ ಒಟ್ಟಿಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ನನ್ನ ಕಲಾಬದುಕಿನ ಮೇಲಿನ ಅಣ್ಣನ ಕೃಪಾದೃಷ್ಟಿ ನನ್ನ ಜನ್ಮಾಂತರ ಪುಣ್ಯ..
ಇಂದು ನನ್ನ ಕಲಾದೇವರು ಹುಟ್ಟಿದ ದಿನ..
ನೀವು ನನ್ನ ಮಾನಸದಲ್ಲಿ ನೆನಪಿನ ಸಾಗರ<>

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments