Webdunia - Bharat's app for daily news and videos

Install App

ದಳಪತಿ ವಿಜಯ್ ನೇತೃತ್ವದ ಪಕ್ಷಕ್ಕೆ ಅಧಿಕೃತ ಮುದ್ರೆಯೊತ್ತಿದ ಚುನಾವಣಾ ಆಯೋಗ

Sampriya
ಭಾನುವಾರ, 8 ಸೆಪ್ಟಂಬರ್ 2024 (15:49 IST)
Photo Courtesy X
ಚೆನ್ನೈ: ಕಾಲಿವುಡ್‌ನ ಸೂಪರ್‌ ಸ್ಟಾರ್ ನಟ ವಿಜಯ್ ದಳಪತಿ ಆರಂಭಿಸಿದ ತಮಿಳಿಗ ವೆಟ್ರಿ ಕಳಗಂ ಪಕ್ಷಕ್ಕೆ ಚುನಾವಣಾ ಆಯೋಗವು ಅಧಿಕೃತ ಮುದ್ರೆ ನೀಡಿದೆ.

ಫೆಬ್ರುವರಿ 2ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೇವೆ. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿದ ನಂತರ, ಚುನಾವಣಾ ಆಯೋಗವು ನಮ್ಮ ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ನೋಂದಾಯಿಸಿದೆ ದಖಪತಿ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

ಚುನಾವಣಾ ರಾಜಕೀಯದಲ್ಲಿ ಭಾಗವಹಿಸಲು ನಮ್ಮ ಪಕ್ಷವನ್ನು ಆಯೋಗ ಅನುಮೋದಿಸಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಿನಿಂದಲೇ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ ಎಂದು ಪಕ್ಷದ ಸಂಸ್ಥಾಪಕ ವಿಜಯ್‌ ಹೇಳಿದ್ದಾರೆ.

2026ರಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆ ಚುನಾವಣೆಯಲ್ಲಿ ವಿಜಯ್‌ ಅವರ ಪಕ್ಷವು ಆಖಾಢಕ್ಕೆ ಇಳಿಯುವುದು ಖಚಿತವಾಗಿದೆ. ವೆಟ್ರಿ ಕಳಗಂ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸುತ್ತಾ ಅಥವಾ ಇತರ ಪಕ್ಷದೊಂದಿಗೆ ಮೈತ್ರಿ ಮಾಡುತ್ತಾ ಕಾದು ನೋಡಬೇಕಿದೆ.

ವಿಜಯ್ ಅಭಿನಯದ ದಿ ಗೋಟ್ ಸಿನಿಮಾ ಕೆಲ ದಿನಗಳ ತೆರೆಗೆ ಬಂದಿದ್ದು, ಚಿತ್ರಮಂದಿರಗಳಲ್ಲಿ  ಮೂಲಕ ಸದ್ದು ಮಾಡುತ್ತಿದ್ದಾರೆ. ಥಿಯೇಟರ್‌ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments