Select Your Language

Notifications

webdunia
webdunia
webdunia
Sunday, 13 April 2025
webdunia

ಪುನೀತ್ ಆಸೆ ಈಡೇರಿಸಲು ಮುಂದಾದ ಕುಟುಂಬ

ಚಿತ್ರರಂಗ
ಬೆಂಗಳೂರು , ಶನಿವಾರ, 11 ಡಿಸೆಂಬರ್ 2021 (14:13 IST)
ಅಪ್ಪು ಕಂಡಿದ್ದ ಅನೇಕ ಕನಸುಗಳನ್ನು ಅವರ ಕುಟುಂಬದವರು ಈಗ ನನಸು ಮಾಡುತ್ತಿದ್ದಾರೆ. ಅದರ ಅಂಗವಾಗಿ ಇತ್ತೀಚೆಗೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿತ್ತು.

ಅದೇ ರೀತಿ ಈಗ ಇನ್ನೊಂದು ಕನಸನ್ನು ಡಾ. ರಾಜ್ಕುಮಾರ್ ಕುಟುಂಬ ಕೈಗೆತ್ತಿಕೊಳ್ಳುತ್ತಿದೆ. ಅಣ್ಣಾವ್ರು ಆಡಿ ಬೆಳೆದ ಮನೆಯನ್ನು ದುರಸ್ತಿ ಮಾಡಿಸಿ, ಅದನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ಚಾಮರಾಜನಗರ ಗಡಿಯ ತಾಳವಾಡಿ ಸಮೀಪದ ಗಾಜನೂರಿನಲ್ಲಿ ಡಾ. ರಾಜ್ಕುಮಾರ್ ಅವರು ಆಡಿ ಬೆಳೆದ ಮನೆ ಇದೆ. ಆ ಜಾಗ ಎಂದರೆ ಪುನೀತ್ ರಾಜ್ಕುಮಾರ್ ಅವರಿಗೆ ಅಚ್ಚುಮೆಚ್ಚು ಆಗಿತ್ತು. ಅಲ್ಲಿಗೆ ಅವರು ಆಗಾಗ ಭೇಟಿ ನೀಡುತ್ತಿದ್ದರು.

ಸದ್ಯ ಈ ಮನೆ ಕುಸಿಯುವ ಹಂತದಲ್ಲಿದೆ. ಕಳೆದ ಮೂರುವರೆ ತಿಂಗಳ ಹಿಂದೆ ಗಾಜನೂರಿನ ಹಳೆ ಮನೆಗೆ ಪುನೀತ್ ಭೇಟಿ ನೀಡಿದ್ದರು. ಈ ವರ್ಷ ಸುರಿದ ಭಾರಿ ಮಳೆಯಿಂದಾಗಿ ಈ ಮನೆಗೆ ಹಾನಿ ಆಗಿದೆ. ಹಾಗಾಗಿ ಅದನ್ನು ದುರಸ್ತಿ ಮಾಡಿಸಲು ಅಪ್ಪು ನಿರ್ಧರಿಸಿದ್ದರು.

ಗಾಜನೂರಿಗೆ ಮತ್ತೆ ಬಂದು ಅಪ್ಪಾಜಿಯವರ ಹಳೇ ಮನೆಯನ್ನು ದುರಸ್ತಿ ಮಾಡಿಸುವುದಾಗಿ ಪುನೀತ್ ರಾಜ್ಕುಮಾರ್ ಅವರು ಹೇಳಿದ್ದರು. ಆದರೆ ಆ ಕಾರ್ಯ ನೆರವೇರುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದರು. ಅಪ್ಪು ಅಂದುಕೊಂಡ ಕೆಲಸವನ್ನು ಈಗ ಅವರ ಕುಟುಂಬದವರು ಪೂರ್ಣಗೊಳಿಸಲು ತೀರ್ಮಾನಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಾಳಿಪಟ 2 ಡಬ್ಬಿಂಗ್ ಮುಗಿಸಿದ ಗಣೇಶ್: ಇನ್ನೇನು ಬಿಡುಗಡೆಯೇ ಬಾಕಿ